LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೂ ಬೆಳೆಗಾರರಿಗೆ ಅಳತೆಯಲ್ಲಿ ಮೋಸ ಮಾಡದಂತೆ ಕಟ್ಟುನಿಟ್ಟಿನ ಸೂಚನೆ.!

 

ಚಿತ್ರದುರ್ಗ: ಚಿತ್ರದುರ್ಗ ಕೃಷಿ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ ಸಗಟು ಹೂವಿನ ಮಾರುಕಟ್ಟೆಯಲ್ಲಿ ಹೂವುಗಳನ್ನು ಮಾರಾಟಕ್ಕಾಗಿ ತರುವ ಹೂ ಬೆಳೆಗಾರರು ಹೂವಿನ ಅಳತೆಯಲ್ಲಿ ರೈತರಿಗೆ ಮೋಸವಾಗುತ್ತಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಈಚೆಗೆ ಎ.ಪಿ.ಎಂ.ಸಿ. ಕಾರ್ಯದರ್ಶಿ ಬಿ.ಎಲ್.ಕೃಷ್ಣಪ್ಪ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಗುರುಪ್ರಸಾದ್ ಸಮ್ಮುಖದಲ್ಲಿ ಹೂ ಬೆಳೆಗಾರರು ಮತ್ತು ಹೂವಿನ ಸಗಟು ವರ್ತಕರ ಸಭೆ ನಡೆಸಲಾಯಿತು.

ಈ ಹಿಂದೆ ಅನೇಕ ಬಾರಿ ತಿಳಿಸಿದಂತೆ ಹೂವಿನ ಅಳತೆಯಲ್ಲಿ ಯಾವುದೇ ಕಾರಣಕ್ಕೆ ಮೋಸ ಮಾಡದಂತೆ ಕಟ್ಟುನಿಟ್ಟಾಗಿ ಹೂವಿನ ವರ್ತಕರಿಗೆ ತಿಳಿಸಲಾಗಿದ್ದು, ಈ ಸಂಬಂಧ ದೂರುಗಳು ಕಂಡು ಬಂದಲ್ಲಿ ಹೂವಿನ ವರ್ತಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಸಭೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ಬಿ.ಎಲ್.ಕೃಷ್ಣಪ್ಪ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿರ್ದೇಶಕ ಎಂ.ಗುರುಪ್ರಸಾದ್, ಹೂ ಬೆಳೆಗಾರರು ಹಾಗೂ ಹೂವಿನ ವರ್ತಕರಾದ ತಿರುಮಲ  ಪ್ಲವರ್ ಸ್ಟಾಲ್ ಮಾಲೀಕರು, ಲಕ್ಷ್ಮೀಪ್ರಿಯ ಪ್ಲವರ್ ಸ್ಟಾಲ್ ಮಾಲೀಕರು, ಆದಿಶಕ್ತಿ ಪ್ಲವರ್ ಸ್ಟಾಲ್ ಮಾಲೀಕರು ಸೇರಿದಂತೆ ಸಗಟು ಹೂವಿನ ವರ್ತಕರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರ