LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆತ್ತವರು ಓದಲೇಬೇಕಾದ ಸುದ್ದಿ ಇದು: ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪ, ಮನೆ ಬಿಟ್ಟ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ..! ಯುವತಿಯ ಪ್ಲಾನ್ ಗೆ ಪೋಲೀಸರೇ ಶಾಕ್


ಮಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ  ಹಿಂದೂ ಯುವತಿಯೊಬ್ಬಳ ನಾಪತ್ತೆ ಪ್ರಕರಣ ಸಿನಿಮೀಯ ರೀತಿಯಲ್ಲಿ ಬಯಲಾಗಿದ್ದು, ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು‌ ಯತ್ನಿಸಿದ್ದ ಆಕೆಯ ಪ್ಲ್ಯಾನ್ ಗೆ ಪೋಷಕರೇ ಬೆಚ್ಚಿಬಿದ್ದಿದ್ದಾರೆ.


ವಿದೇಶದಲ್ಲಿ ಓದುವ ನೆಪ, ಮನೆ ಬಿಟ್ಟ ಯುವತಿ..!ಸವಣೂರಿನ ಕಾಲೇಜೊಂದರಲ್ಲಿ ಪಿಯುಸಿ ಮುಗಿಸಿ, ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪವೊಡ್ಡಿದ 18ರ ಯುವತಿ ದೀಕ್ಷಾ ಮನೆಯಲ್ಲಿ ಪೋಷಕರನ್ನು ಕಥೆ ಕಟ್ಟಿ ನಂಬಿಸಿ ಕಳೆದ ಆಗಸ್ಟ್ 25 ರಂದು ಮನೆ ಬಿಟ್ಟಿದ್ದಳು. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಪುತ್ರನನ್ನು ಹೊಂದಿರುವ ಮೂರು ಮಕ್ಕಳ ಪೋಷಕರಾಗಿರುವ ದೀಕ್ಷಾ ತಂದೆ ತಾಯಿ ಅವಿದ್ಯಾವಂತರಾದ ಕಾರಣ ಮಗಳು ಹೇಳುವ ಕತೆಯನ್ನು ನಿಜವೆಂದೇ ನಂಬಿದ್ದರು.

ತನ್ನ ಜೊತೆ ಕಲಿತ ಇಬ್ಬರು ಸ್ನೇಹಿತೆಯರು ಬೆಂಗಳೂರಿನಲ್ಲಿದ್ದು, ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ತನ್ನನ್ನು ಬೀಳ್ಕೊಡಲು ಬಂದಿರುವುದಾಗಿಯೂ ಪೋಷಕರಿಗೆ ನಂಬಿಸಿದ್ದಳು. ಅದರಂತೆ ವಿಮಾನ ನಿಲ್ದಾಣದವರೆಗೂ ಗೆಳತಿಯರ ಜೊತೆ ಹೋದ ದೀಕ್ಷಾ ಬಳಿಕ ವಿಮಾನ ನಿಲ್ದಾಣದ ಒಳಗೆ ಹೋಗುತ್ತಿದ್ದಂತೆ ಗೆಳತಿಯರು ವಾಪಾಸ್ ಬಂದಿದ್ದರು. ವಿಚಿತ್ರ ಏನೆಂದರೆ ದೀಕ್ಷಾ ತನ್ನ ಗೆಳತಿಯರಿಗೆ ತನಗೆ ಅಪ್ಪ ಅಮ್ಮ ಇಲ್ಲವೆಂದೇ ಕಥೆ ಕಟ್ಟಿ ಅವರಿಂದ ಹಣದ ಸಹಾಯ ಪಡೆದಿದ್ದಳು ಎಂಬ ಮಾಹಿತಿಯೂ ಲಭಿಸಿದ್ದು, ಈ ಬಗ್ಗೆ ಖಚಿತತೆ ಸಿಕ್ಕಿಲ್ಲ.

ಬಸ್ ನಲ್ಲಿ ಅನ್ಯಕೋಮಿನ ಜೋಡಿ ಶಂಕೆ, ಚಾಣಾಕ್ಷತನ ಮೆರೆದ ಬಸ್ ನಿರ್ವಾಹಕ..!ದೀಕ್ಷಾ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ವಿಮಾನ ನಿಲ್ದಾಣದಲ್ಲಿ ಸವಣೂರು ಮೂಲದ ಮುಸ್ಲಿಂ ಯುವಕ‌ನ ಜೊತೆ ಸೇರಿದ ದೀಕ್ಷಾ ಬಳಿಕ ವಿಮಾನ ನಿಲ್ದಾಣದಿಂದ ಹೊರಬಂದು ವಾಪಾಸ್ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದಳು‌. ಆದರೆ ಆ ಬಸ್ ನ ನಿರ್ವಾಹಕ ಅನುಮಾನಗೊಂಡು ಆತ ಯುವತಿಯ ಫೋಟೋ ತೆಗೆದು ಹಿಂದೂ ಸಂಘಟನೆಯ ಯುವಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಅದು ಪುತ್ತೂರಿನ ಹಿಂದೂ ಸಂಘಟನೆಗಳಿಗೂ ಮಾಹಿತಿ ಹೋಗಿತ್ತು.

ಬಳಿಕ ಯುವತಿಯ ಫೋಟೋ ಹಲವು ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೊಳ್ಳಲಾಗಿದ್ದು, ಫೋಟೋದಲ್ಲಿರುವ ಯುವತಿ ಕೊಲ್ಲಮೊಗ್ರಿನ ದೀಕ್ಷಾ ಎಂಬುದು ಗೊತ್ತಾಗುತ್ತಿದ್ದಂತೆ ಆಕೆಯ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು.

ಜಾಣ್ಮೆ ಮೆರೆದ ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ಇತ್ತ ಪೋಷಕರಿಗೆ ತಮ್ಮ ಮಗಳು ವಿದೇಶಕ್ಕೆ ತೆರಳದಿರುವುದು ಖಚಿತವಾಗುತ್ತಿದ್ದಂತೆ ಸುಬ್ರಹ್ಮಣ್ಯ ಪೋಲಿಸ್ ಠಾಣಾಧಿಕಾರಿ ಕಾರ್ತಿಕ್ ಅವರನ್ನು ಸಂಪರ್ಕಿಸಿದ್ದು, ದೀಕ್ಷಾಳ ಮೊಬೈಲ್ ಲೊಕೇಷನ್ ಆಧಾರದಲ್ಲಿ ಆಕೆ ಬೆಂಗಳೂರಿನ ಹೊರವಲಯದಲ್ಲಿ ಇರುವ ಬಗ್ಗೆ ತಿಳಿದುಬಂದಿತ್ತು.

ಈ ಸಮಯದಲ್ಲಿ ಜಾಣ್ಮೆ ಮೆರೆದ ಸಬ್ ಇನ್ಸ್‌ಪೆಕ್ಟರ್ ಕಾರ್ತಿಕ್ ಅವರು ಇಲ್ಲಿಂದ ಬೆಂಗಳೂರಿಗೆ 550km ದೂರವಿರುವ ಕಾರಣ ಕೂಡಲೇ ಬೆಂಗಳೂರಿನ ಪೋಲಿಸ್ ಠಾಣೆಯಲ್ಲಿ ದೂರು ನೀಡುವಂತೆ ಸಲಹೆ ನೀಡಿದ್ದು, ಅಲ್ಲಿ ದೂರು ದಾಖಲಿಸಿಕೊಳ್ಳದೇ ಇದ್ದರೆ ತಾನೇ ಖುದ್ದಾಗಿ ಪ್ರಕರಣ ದಾಖಲಿಸಿಕೊಳ್ಳುವ ಭರವಸೆ ನೀಡಿದ್ದರು. ಆದರೆ ಬಳಿಕ ದೀಕ್ಷಾ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಪೋಷಕರ ಚಿಂತೆಗೆ ಕಾರಣವಾಗಿತ್ತು.

ನಂತರ ಬೆಂಗಳೂರಿಗೆ ತೆರಳಿದ ದೀಕ್ಷಾ ಪೋಷಕರು ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಕಳೆದ 28ರಂದು ದೂರು ನೀಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಪ್ಪಾರಪೇಟೆ ಪೋಲಿಸರು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಉಪ್ಪಾರಪೇಟೆ ಪೋಲಿಸ್ ಠಾಣೆಗೆ ಕರೆತಂದಿದ್ದು, ನಾಳೆ ದೀಕ್ಷಾಳನ್ನು ಸುಬ್ರಹ್ಮಣ್ಯಕ್ಕೆ ಕರೆತರುವ ಮಾಹಿತಿ ಲಭಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆಯಿಂದ ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ ಪ್ರಾರಂಭ.! ರೇಟ್ ಇಂತಿದೆ.!ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರ