LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊನಗೊನ್ನೆ ಸೊಪ್ಪು 11 ಸಮಸ್ಯೆಗಳಿಗೆ ರಾಮಬಾಣ




ಹೊನಗೊನ್ನೆ ಸೊಪ್ಪು ಈ ಪದ ಸಾಮಾನ್ಯವಾಗಿ ದಕ್ಷಿಣ ಭಾರತದ ಹಳ್ಳಿಗಾಡಿನಲ್ಲಿ ಸಾಮಾನ್ಯವಾಗಿ ಕೇಳಿಬರುತ್ತದೆ. ಈ ಹೊನಗೊನ್ನೆ ಸೊಪ್ಪು ದಕ್ಷಿಣ ಭಾರತದ ಹಳ್ಳಿಗಾಡಿನ ನಿವಾಸಿಗಳ ದೈನಂದಿನ ಆಹಾರ ಪದ್ಧತಿಯ ಪ್ರಮುಖ ಆಹಾರವಾಗಿದೆ.






ಪಲ್ಯ, ಬಸ್ಸಾರು, ಸಾಂಬಾರು ರೀತಿಯಾಗಿ ವಿವಿಧ ರೀತಿಯ ಖಾದ್ಯಗಳಲ್ಲಿ ಈ ಹೊನಗೊನ್ನೆ ಸೊಪ್ಪನ್ನು ಬಳಸುತ್ತಾರೆ. ಸಾಮಾನ್ಯವಾಗಿ ಹೊಲಗಳಲ್ಲಿ ಹೇರಳವಾಗಿ ಸಿಗುವ ಈ ಹೊನಗೊನ್ನೆ ಸೊಪ್ಪನ್ನು ಆಯುರ್ವೇದ ಶಾಸ್ತ್ರದಲ್ಲಿ ಸಂಸ್ಕೃತದಲ್ಲಿ ಮತ್ಸ್ಯಾಕ್ಷಿ ಎಂದು ಕರೆಯಲ್ಪಡುತ್ತದೆ. ಈ ಸೊಪ್ಪು ತನ್ನ ಔಷಧೀಯ ಗುಣಗಳಿಂದ ಪ್ರಖ್ಯಾತಿ ಹೊಂದಿದೆ.






ಈ ಸೊಪ್ಪಿನಲ್ಲಿ ಶೇ.5ರಷ್ಟು ಪ್ರೊಟೀನ್, ಶೇ. 16 ಮಿಲಿಗ್ರಾಂ ನಷ್ಟು ಕಬ್ಬಿಣಾಂಶ ಹೊಂದಿದೆ. ಕಣ್ಣು-ಕೂದಲಿನ ಚರ್ಮದ ಸಮಸ್ಯೆಗೆ ಇದು ರಾಮಬಾಣ. ಅಷ್ಟೇ ಅಲ್ಲದೆ ಕೆಮ್ಮು ನೆಗಡಿ ಸಕ್ಕರೆ ಕಾಯಿಲೆ ಮೂಲ ಸಮಸ್ಯೆಗೂ ಇದು ಪರಿಹಾರವಾಗಿದೆ. ಇಂತಹ ಅಮೂಲ್ಯ ಔಷಧೀಯ ಗುಣಗಳ ಸೊಪ್ಪಿನ ಉಪಯೋಗಗಳು ಇಲ್ಲಿದೆ.






ಎರಡು ಚಮಚ ಬೇಯಿಸಿದ ಸೊಪ್ಪಿನ ರಸವನ್ನು ನಲವತ್ತೈದು ದಿನಗಳು ತಪ್ಪದೇ ಸೇವಿಸಿದರೆ ಕಣ್ಣಿನ ದೋಷ ದೂರವಾಗುತ್ತದೆ. ಈ ಸೊಪ್ಪಿನ ಹೂವುಗಳನ್ನು ಸೇವಿಸಿದರೆ ಇರುಳು ಕುರುಡುತನ ವಾಸಿಯಾಗುತ್ತದೆ. ಕಣ್ಣಲ್ಲಿ ನೀರು ಸೋರುವುದು ಕಣ್ಣಿನ ಊತ, ಕಾಟರಾಕ್ಟ್ ಸಮಸ್ಯೆ ವಾಸಿಯಾಗುತ್ತದೆ. ಈ ಸೊಪ್ಪಿನ ರಸವನ್ನು ಎಳ್ಳೆಣ್ಣೆ ಅಥವಾ ಕೊಬ್ಬರಿ ಎಣ್ಣೆಯಲ್ಲಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಂಡರೆ ಕಣ್ಣಿನ ಸಮಸ್ಯೆ ದೂರಾಗುತ್ತದೆ ಮತ್ತು ನೆನಪಿನ ಶಕ್ತಿ ವೃದ್ಧಿಯಾಗುತ್ತದೆ. ಈ ಸೊಪ್ಪಿನ ಬೇರುಗಳು ಹುಳಿತೇಗು ಸಮಸ್ಯೆಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.



ರಕ್ತದೊತ್ತಡ ಹೆಚ್ಚಿರುವವರು ಈ ಸೊಪ್ಪನ್ನು ಸೇವಿಸುತ್ತಿದ್ದರೆ ಬಿಪಿ ನಿಯಂತ್ರಣಕ್ಕೆ ಬರುತ್ತದೆ. ಚರ್ಮದ ಕಜ್ಜಿ ಗುಳ್ಳೆ ಮೊಡವೆ ಸಮಸ್ಯೆಗಳಿಗೆ ಔಷಧಿಯಾಗಿ ಬಳಕೆಯಾಗುತ್ತದೆ. ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸುತ್ತದೆ ಮತ್ತು ಈ ಸೊಪ್ಪಿನಲ್ಲಿರುವ ನಾರಿನಂಶ ಸಕ್ಕರೆ ಕಾಯಿಲೆಯನ್ನು ದೂರ ತಳ್ಳುತ್ತದೆ. ಈ ಗಿಡದ ಬೇರನ್ನು ಹಾಲಿನಲ್ಲಿ ಅರೆದು ಕುಡಿಯುವುದರಿಂದ ಮೂತ್ರ ವಿಸರ್ಜನೆ ಸಮಸ್ಯೆ ನಿವಾರಣೆಯಾಗುತ್ತದೆ. ಈ ಸೊಪ್ಪಿನ ರಸ ಮತ್ತು ಮೂಲಂಗಿ ಸೊಪ್ಪಿನ ರಸ 10ಗ್ರಾಂ ಮಿಶ್ರಣ ಮಾಡಿ ಚಿಟಿಕೆ ಸೈಂಧವ ಲವಣ ಸೇರಿಸಿ ಕುಡಿದರೆ ಮೂಲವ್ಯಾಧಿ ಸಮಸ್ಯೆ ನಿವಾರಣೆಯಾಗುತ್ತದೆ.

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌