LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸ Ration Card ಅರ್ಜಿ ಸಲ್ಲಿಕೆ ಪ್ರಾರಂಭ.!

ಬೆಂಗಳೂರು : ಬಡ ಕುಟುಂಬದವರು ಸರ್ಕಾರಿ ಸೌಲಭ್ಯ (government facility) ಪಡೆಯಲು ರೇಷನ್ ಕಾರ್ಡ್ ಬೇಕೆಬೇಕು. ಇಷ್ಟು ದಿನ ಸರ್ವರ್‌ ಸಮಸ್ಯೆ (server problem) ಕಾರಣ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸಾಧ್ಯವಿರಲಿಲ್ಲ. ಆದರೆ ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ (all districts) ಮತ್ತೆ ಅರ್ಜಿ ಸಲ್ಲಿಕೆ ಕಾರ್ಯ ಆರಂಭಿಸಲಾಗಿದೆ. ಪಡಿತರ ಚೀಟಿಗಾಗಿ ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ APL ಅಥವಾ BPL ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪಡಿತರ ಚೀಟಿಗೆ (ration card) ಅರ್ಜಿ ಸಲ್ಲಿಸುವವರು ಆಹಾರ ಇಲಾಖೆಯ (Food Department) ಕಚೇರಿಗೆ ಹೋಗಬೇಕಾಗಿಲ್ಲ. ಬದಲಿಗೆ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಕೆ ಮಾಡಬಹುದು.

ಬೇಕಾಗುವ ದಾಖಲೆಗಳು :

* ಆಧಾರ್ ಕಾರ್ಡ್
* ಮೊಬೈಲ್ ಸಂಖ್ಯೆ
* Email ಐಡಿ
* ಪ್ಯಾನ್ ಕಾರ್ಡ್
* ವಿದ್ಯುತ್ ಬಿಲ್




ಮೇಲೆ ನೀಡಿರುವ ದಾಖಲೆಗಳೊಂದಿಗೆ (documents) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ 15 ದಿನಗಳ ನಂತರ ನೀವು 100 ರೂಪಾಯಿ ಶುಲ್ಕ ಪಾವತಿಸಿ ಪಡಿತರ ಚೀಟಿಯನ್ನು ಪಡೆಯಬಹುದು. ಪಡಿತರ ಚೀಟಿ ಕುರಿತ ಯಾವುದೇ ಗೊಂದಲಗಳಿದ್ದರೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್ 18004259339 ಅಥವಾ ಸಹಾಯವಾಣಿ (help line) 1967ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.



ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ :




ಹಂತ 1: ಮೊದಲು https://ahara.kar.nic.in/ ಅಧಿಕೃತ ಸರ್ಕಾರಿ ವೆಬ್ ಸೈಟ್ ಗೆ ಭೇಟಿ ನೀಡಿ.

ಹಂತ 2 : ಮುಖಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ಹಂತ 3 : ಹೊಸ ಪಡಿತರ ಚೀಟಿ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಬೇಕು.

ಹಂತ 4 : ಪಡಿತರ ಚೀಟಿಯ ಪ್ರಕಾರವನ್ನು ನೀವು ನಿರ್ಧರಿಸಬೇಕಾಗುತ್ತದೆ.

ಹಂತ 5 : ಆಯ್ಕೆ ಮಾಡಿದ ನಂತರ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಸಂಖ್ಯೆಯನ್ನು ದೃಢೀಕರಿಸಿ (confirm).

ಹಂತ 6 : ಒಟಿಪಿಯನ್ನು ಭರ್ತಿ ಮಾಡಿದ ಬಳಿಕ ನಿಮ್ಮ ನಂಬರ್ ದೃಢೀಕರಿಸಲಾಗುತ್ತದೆ.

ಹಂತ 7 : ಪ್ರೋಗ್ರಾಂ ಸೇರಿಸಲು ‘ಸೇರಿಸು’ ಆಯ್ಕೆ ಮಾಡಿ.

ಹಂತ 8 : ನಂತರ ನೋಂದಣಿ ಫಾರ್ಮ್ ಅನ್ನು ನಿಮ್ಮ ಮುಂದೆ ಪ್ರದರ್ಶಿಸಲಾಗುವುದು.

ಹಂತ 9 : ನೀವು ‘ಉಳಿಸು (save)’ ಆಯ್ಕೆ ಮಾಡುವ ಮೊದಲು Form ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ.

ಹಂತ 10 : ಭವಿಷ್ಯದ ಬಳಕೆಗಾಗಿ ನೋಂದಣಿ ಸಂಖ್ಯೆಯನ್ನು (Registration number) ಫೈಲ್ ನಲ್ಲಿ ಇರಿಸಿರಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!