LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು, ರಾಯಚೂರು ವಿಮಾನ ನಿಲ್ದಾಣಗಳಿಗೆ ₹57.63 ಕೋಟಿ ಮಂಜೂರು

ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು- ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ₹50 ಕೋಟಿ ಮತ್ತು ₹43.32 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಒಟ್ಟು ₹93.32 ಕೋಟಿಯನ್ನು ಈ ಎರಡೂ ಯೋಜನೆಗಳಿಗೆ ಒದಗಿಸಿದಂತಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಸೋಮವಾರ ತಿಳಿಸಿದ್ದಾರೆ.

ಇದಲ್ಲದೆ, ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣಗಳ ಕಾಮಗಾರಿಗಳಿಗೆ ಒಟ್ಟಾಗಿ ₹57.63 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ ₹14.62 ಕೋಟಿ ಮೊತ್ತವು ರಾಯಚೂರು ವಿಮಾನ ನಿಲ್ದಾಣದ ಕೆಲಸಗಳಿಗೆ ವಿನಿಯೋಗವಾಗಲಿದೆ. ಮೈಸೂರಿನಲ್ಲಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈ ಹಣ ಬಳಸಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜಧಾನಿಯ ಪಕ್ಕದಲ್ಲಿರುವ ತುಮಕೂರನ್ನು ಮಧ್ಯ ಕರ್ನಾಟಕದೊಂದಿಗೆ ಬೆಸೆಯಲಿರುವ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ತ್ವದ್ದಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಭಾಗಗಳಿಗೆ ತ್ವರಿತ ರೈಲು ಸಂಚಾರ ಸಾಧ್ಯವಾಗಲಿದೆ. ಹಾಗೆಯೇ ಗದಗ-ವಾಡಿ ರೈಲು ಮಾರ್ಗದ ಅಭಿವೃದ್ಧಿಯಿಂದ ಹುಬ್ಬಳ್ಳಿಯನ್ನು ಒಳಗೊಂಡು ಕಿತ್ತೂರು ಕರ್ನಾಟಕ ಮತ್ತು ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಿಗೆ ಸುಲಭವಾಗಿ ತಲುಪಬಹುದಾಗಿದೆ. ಇದರಿಂದ ಆ ಜಿಲ್ಲೆಗಳಲ್ಲಿ ಮೂಲಸೌಕರ್ಯ ವೃದ್ಧಿ ಸೇರಿದಂತೆ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆಯಲಿದೆ ಎಂದು ಅವರು ವಿವರಿಸಿದ್ದಾರೆ.

ರೈಲ್ವೆ ಯೋಜನೆಗಳು ಮೂಲತಃ ಕೇಂದ್ರ ಸರಕಾರಕ್ಕೆ ಸೇರಿದ್ದರೂ ಕೆಲವು ಯೋಜನೆಗಳಿಗೆ ತಗುಲುವ ಒಟ್ಟು ವೆಚ್ಚದಲ್ಲಿ ಶೇಕಡ 50ರಷ್ಟನ್ನು ರಾಜ್ಯ ಸರಕಾರವೇ ಭರಿಸುತ್ತದೆ. ಭೂಸ್ವಾಧೀನ ಪ್ರಕ್ರಿಯೆಯು ಮೇಲ್ಕಂಡ ಎರಡೂ ಯೋಜನೆಗಳ ವ್ಯಾಪ್ತಿಯಲ್ಲಿ ಅಂತಿಮ ಹಂತದಲ್ಲಿದೆ. ಇದು ಮುಗಿದ ಕೂಡಲೇ ಯೋಜನೆಯ ಕಾಮಗಾರಿಗಳು ಕ್ಷಿಪ್ರ ಗತಿಯಲ್ಲಿ ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹಾಗೆಯೇ, ರಾಜ್ಯದ ಎಲ್ಲ ಭಾಗಗಳಲ್ಲೂ ಉದ್ದಿಮೆಗಳು ನೆಲೆಯೂರುತ್ತಿದ್ದು, ಕೃಷಿ ಆಧಾರಿತ ಕೈಗಾರಿಕೆಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮಾರುಕಟ್ಟೆ ವಿಸ್ತರಣೆ, ಸುಲಭ ಸಾಗಾಟ, ಸುಗಮ ಮತ್ತು ತ್ವರಿತ ಪ್ರಯಾಣ ಇವುಗಳನ್ನು ಪರಿಗಣಿಸಿ, ಎಲ್ಲಾ ಕಡೆಗಳಲ್ಲೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ದೃಷ್ಟಿಯಿಂದ ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸುಸಜ್ಜಿತ ವಿಮಾನ ನಿಲ್ದಾಣ ಇರಬೇಕೆನ್ನುವುದು ಸರಕಾರದ ಆಶಯವಾಗಿದೆ ಎಂದು ಪಾಟೀಲ ವಿವರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ