LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ: ಆಸ್ತಿ ತೆರಿಗೆಯಲ್ಲಿ ಶೇ.05 ರಷ್ಟು ಏರಿಕೆ


ಬಳ್ಳಾರಿ,ಏ.06

ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ಮತ್ತು ವಾಣಿಜ್ಯ ಉದ್ದೇಶದ ಆಸ್ತಿಗಳ ತೆರಿಗೆಯನ್ನು 2026-27ನೇ ಸಾಲಿಗೆ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ ಎಂದು

ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ನಗರಾಡಳಿತ ನಿರ್ದೇಶನಾಲಯದ ಸುತ್ತೋಲೆ ಮತ್ತು ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ತಿದ್ದುಪಡಿ ನಿಯಮಗಳನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಆಸ್ತಿ ತೆರಿಗೆಯನ್ನು ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ ಪರಿಷ್ಕರಿಸುವುದು ಕಡ್ಡಾಯವಾಗಿದೆ.

ಕಂಪ್ಲಿ ಪುರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲೀಕರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ. ವಸತಿ ಆಸ್ತಿಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ, ವಾಣಿಜ್ಯ ಮತ್ತು ಕೈಗಾರಿಕಾ ಆಸ್ತಿಗಳ ಖಾಲಿ ನಿವೇಶನ ಹಾಗೂ ಕಟ್ಟಡಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದ್ದು, ಈ ಹೊಸ ದರಗಳು 2026-27ನೇ ಆರ್ಥಿಕ ಸಾಲಿಗೆ ಅನ್ವಯವಾಗಲಿವೆ.

ಆಸ್ತಿ ಮಾಲೀಕರು ಈ ಬದಲಾವಣೆಯನ್ನು ಗಮನಿಸಿ, ಪರಿಷ್ಕೃತ ದರದಂತೆ ತೆರಿಗೆ ಪಾವತಿಸಿ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು