LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

10 ವರ್ಷಕ್ಕೂ ಹೆಚ್ಚು ಕಾಲ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು.! ಹೈಕೋರ್ಟ್ ಮಹತ್ವದ ಆದೇಶ.!

 

ಬೆಂಗಳೂರು: ರೇಷ್ಮೆ, ತೋಟಗಾರಿಕೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಕ್ಕೂ ಹೆಚ್ಚು ಕಾಲದಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಆದೇಶಿಸಿದೆ.

ಅರ್ಜಿದಾರರನ್ನು ಮೂರು ತಿಂಗಳಲ್ಲಿ ಸೂಕ್ತ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಡಕೋಳದ ಶಾಂತಲಕ್ಷ್ಮಿ ಮತ್ತು 30ಕ್ಕೂ ಅಧಿಕ ಮಂದಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕ ಸದಸ್ಯ ಪೀಠ ಈ ತೀರ್ಪು ನೀಡಿದೆ.

ಅರ್ಜಿಗಳನ್ನು ಮಾನ್ಯ ಮಾಡಿದ ಹೈಕೋರ್ಟ್, ಇಲಾಖೆಗಳು ಅರ್ಜಿದಾರರ ಸೇವೆ ಕಾಯಂಗೆ ಅರ್ಹರಲ್ಲ ಎಂದು 2010ರ ಜೂನ್ 14 ಮತ್ತು 2012 ರ ಜೂನ್ 15 ರಂದು ನೀಡಿದ್ದ ಹಿಂಬರಹಗಳನ್ನು ರದ್ದು ಮಾಡಿದೆ. 2002/2005ರ ನಿಯಮಗಳಂತೆ ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಘೋಷಿಸಿದೆ.

ಈ ಪ್ರಕರಣದಲ್ಲಿ 2002/ 2005ರ ಯೋಜನೆಗಳಂತೆ ಅರ್ಜಿದಾರರು ಸೇವೆ ಕಾಯಂಗೆ ಅರ್ಹರಾಗಿದ್ದಾರೆ. ಅವರ ಸೇವೆ ಕಾಯಂಗೊಂಡಿದ್ದು, ಅವರ ಕೆಲಸದ ಸ್ವರೂಪ ಮತ್ತು ಸೇವೆ ಮುಂದುವರಿಕೆ ಬಗ್ಗೆ ನಿರ್ಧರಿಸಬೇಕಿದೆ. ಅರ್ಜಿದಾರರನ್ನು ಇತರೆ ಸಿಬ್ಬಂದಿಯಂತೆ ಸಮಾನವಾಗಿ ಕಾಣಬೇಕಿದೆ ಎಂದು ಆದೇಶ ನೀಡಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌