LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

110 ಹಳ್ಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಸೂಚನೆ: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು.

ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಫೆಬ್ರವರಿ ಅಂತ್ಯದೊಳಗಾಗಿ ನೀರು ಒದಗಿಸಿ:

ಥಣಿಸಂದ್ರ ಹಾಗೂ ಹೆಗ್ಡೆ ನಗರಕ್ಕೆ ಕಾವೇರಿ ನೀರು ಸಂಪರ್ಕ ಕಲ್ಪಿಸಲು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ಕಾವೇರಿ ನೀರು ಎಲ್ಲಾ ಕಡೆ ಸಿಗುವಂತೆ ಮಾಡಬೇಕು. ಈ ಸಂಬಂಧ ಕಮಿಷನ್ ಮಾಡಿ ಟೆಸ್ಟಿಂಗ್ ಮಾಡಬೇಕು. ನೀರು ಸೋರಿಕೆಯಾಗುವುದನ್ನು ಗುರುತಿಸಿ ಫೆಬ್ರವರಿ ಅಂತ್ಯದೊಳಗಾಗಿ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ನೀಡಲು ಸೂಚನೆ ನೀಡಲಾಯಿತು. ಅಲ್ಲದೇ ಸದರಿ ಪ್ರದೇಶಗಳಿಗೆ ವೇಳಾ ಪಟ್ಟಿ ಸಿದ್ದಪಡಿಸಿ ನಿಗದಿತ ಸಮಯದಲ್ಲಿ ನೀರು ಸರಬರಾಜು ಮಾಡಲು ಸೂಚಿಸಿದರು.

ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ:

ಟೆಲಿಕಾಂ ಲೇಔಟ್ ಬಳಿ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಯಂತ್ರಿಸಲು ಕೇಳಿದ್ದಕ್ಕೆ, ಖಾಲಿ ಜಾಗಗಳಿಗೆ ನೋಟೀಸ್ ನೀಡಿ ಸ್ವಚ್ಛ ಮಾಡಬೇಕು. ನಂತರ ಸಂಬಂಧಪಟ್ಟ ಮಾಲೀಕರಿಂದ ಹಣ ವಸೂಲಿ ಮಾಡಲು ಸೂಚಿಸಿದರು. ಅದಲ್ಲದೆ ರಾಜಕಾಲುವೆಯ ಸೈಡ್ ಡ್ರೈನ್ಸ್ ಗಳಲ್ಲಿ ಹೂಳೆತ್ತುವ ಹಾಗೂ ಜಲಮಂಡಳಿಯ ಒಳ ಚರಂಡಿಗಳಲ್ಲಿ ಕಾಲಕಾಲಕ್ಕೆ ಸಕ್ಕಿಂಗ್ ಮಾಡುತ್ತಿರಲು ಸೂಚಿಸಿದರು.

ಒಂದು ಬಾರಿ ಸ್ವಚ್ಛತೆಗೆ ಪ್ರಸ್ತಾವನೆ ಸಲ್ಲಿಸಿ:

ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಸುಮಾರು 13 ಕಿ.ಮೀ ಕಚ್ಚಾ ಡ್ರೈನ್ ಬರಲಿದ್ದು, ಅದರಲ್ಲಿ ಒಂದು ಬಾರಿ ಸಂಪೂರ್ಣ ಸ್ವಚ್ಛತಾ ಕಾರ್ಯ ನಡೆಸಲು ಪ್ರಸ್ತಾವನೆ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಕ್ಕುಪತ್ರ ನೀಡಲು ಕ್ರಮವಹಿಸಲು ಸೂಚನೆ:

ದೊಡ್ಡಬೆಟ್ಟಹಳ್ಳಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಯೋಜನೆಯಡಿ 30 ಮಂದಿಗೆ ಹಕ್ಕುಪತ್ರ ನೀಡಬೇಕಿದೆ. ಆದರೆ ಈವರೆಗೆ 17 ಮಂದಿಗೆ ನೀಡಿದ್ದು, ಇನ್ನೂ 13 ಮಂದಿಗೆ ಹಕ್ಕುಪತ್ರ ನೀಡಬೇಕಿದೆ. ಈ ಪೈಕಿ ಹಕ್ಕು ಪತ್ರ ನೀಡಲು ಕೂಡಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

17 ದೂರುಗಳ ಸ್ವೀಕಾರ:

ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಳೆದ ಬಾರಿ ನಡೆದ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದಂತಹ ಬಹುತೇಕ ದೂರುಗಳನ್ನು ಇತ್ಯರ್ಥ ಪಡಿಸಲಾಗಿದೆ. ಇಂದು 17 ದೂರುಗಳನ್ನು ಸ್ವೀಕರಿಸಲಾಗಿದ್ದು, ಕಾಲಮಿತಿಯೊಳಗಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರಿಂದ ಸ್ವೀಕರಿಸಿದ ಪ್ರಮುಖ ಅಹವಾಲುಗಳು:


1. ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಮನವಿ.

2. ಸರ್ಕಾರಿ ಶಾಲೆಯ ಬಳಿ ಸ್ವಚ್ಛತೆ ಕಾಪಾಡಲು ಮನವಿ.

3. ರಾಮಕೃಷ್ಣ ಹೆಗ್ಡೆ ನಗರದಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಲು ಮನವಿ.

4. ರಾಜಕಾಲುವೆ ಬಫರ್ ವಲಯದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ತಡೆಯಲು ಮನವಿ.

5. ರಾಜಕಾಲುವೆಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಲು ಮನವಿ

ಈ ವೇಳೆ ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಉಪ ಆಯುಕ್ತರಾದ ಮಮತಾ, ಮುಖ್ಯ ಅಭಿಯಂತರರಾದ ರಂಗನಾಥ್, ಕಾರ್ಯಪಾಲಕ ಅಭಿಯಂತರರು, ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ತರುಗೇಟುKSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮ