Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

16ನೇ ಹಣಕಾಸು ಆಯೋಗದ ಮಾಹಿತಿ ಕೊಡದೆ ವಿಳಂಬ 

ಅಭಿವೃದ್ಧಿಗೆ ಹಿನ್ನಡೆ: ಪಾಲಿಕೆ ಸದಸ್ಯರಿಂದ ಮುಖ್ಯ ಲೆಕ್ಕಾಧಿಕಾರಿಗೆ ತರಾಟೆ


ಬೆಳಗಾವಿ: ಹದಿನಾರನೇ‌ ಹಣಕಾಸು ಆಯೋಗದ ಸಂಪೂರ್ಣ ಮಾಹಿತಿ ಒದಗಿಸದೇ‌ ಅಭಿವೃದ್ಧಿಗೆ ತೊಡಕಾದ ಬೆಳಗಾವಿ ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ನಡೆ ಈಗ ಪಾಲಿಕೆ ಮೇಯರ್, ಉಪಮೇಯರ್, ಆಡಳಿತ ಪಕ್ಷದ ನಾಯಕ ಸೇರಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸದಸ್ಯರ ಕೆಂಗೆಣ್ಣಿಗೆ ಗುರಿಯಾಗಿದೆ.

ಕಳೆದ ಸೋಮವಾರ ನಡೆದ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಮೇಯರ್, ಉಪ ಮೇಯರ್ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ಪಾಲಿಕೆ ಮುಖ್ಯ ಲೆಕ್ಕಾಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಪಾಲಿಕೆಯ 
16ನೇ ಹಣಕಾಸು ಆಯೋಗದ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಆಡಳಿತ ಪಕ್ಷದ ಸದಸ್ಯರಿಗೆ ಒದಗಿಸಬೇಕಿತ್ತು. ಆದರೆ, ಮಾಹಿತಿ ಕೊಡದೆ ಕಾಲಹರಣ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಇದು ಮಹಾನಗರದ ಅಭಿವೃದ್ಧಿಗೆ‌ ಹಿನ್ನಡೆಯನ್ನುಂಟು ಮಾಡುವ ದುರುದ್ದೇಶ ಎಂದು ತರಾಟೆಗೆ ತೆಗೆದುಕೊಂಡರು.

ಉಪ ಮೇಯರ್ ಹನುಮಂತ ಕೊಂಗಾಲಿಯವರಂತೂ, ಪಾಲಿಕೆಯ 16ನೇ ಹಣಕಾಸು ಆಯೋಗದ ಮಾಹಿತಿಯನ್ನು ನೀವು 
ಆಡಳಿತ ಪಕ್ಷಕ್ಕೆ ಕೊಟ್ಟಿಲ್ಲ.‌ ಹೀಗಾಗಿ, ನಮಗೆ ಅಭಿವೃದ್ಧಿ ಮಾಡಲು ಆಗುತ್ತಿಲ್ಲ. ಇದರಿಂದ ಕೆಲ ಸಂಘಟನೆಗಳು ಹಾಗೂ ಕೆಲವು ವ್ಯಕ್ತಿಗಳು ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ನೀವು ಮಾಡುವ ತಪ್ಪಿಗೆ ನಗರಸೇವಕರು ಹೊಣೆಯಾಗಬೇಕಿದೆ. ನಗರ ಸೇವಕರ ಸದಸ್ಯತ್ವಕ್ಕೆ ಕುತ್ತು ಬರಬೇಕೆ ಎಂದು ಮುಖ್ಯ ಲೆಕ್ಕಾಧಿಕಾರಿ ವಿರುದ್ಧ ಹರಿಹಾಯ್ದರು.

ಮೇಯರ್ ಪ್ರೀತಿ ಕಾಮಕರ್ ಮಾತನಾಡಿ, ಪ್ರತಿ ಬಾರಿಯೂ ನೀವು ಮಾಹಿತಿ ಇರದೇ ಸಭೆಗೆ ಬರುತ್ತೀರಿ, ಆದರೆ ಈಗ ಸರ್ಕಾರದಿಂದ ಬಂದ ಮಾಹಿತಿಯನ್ನೇ ಒಂದು ತಿಂಗಳಾದರೂ ನಮಗೆ ನೀಡಿಲ್ಲ ಅಂದರೆ ಹೇಗೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು‌.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
16ನೇ ಹಣಕಾಸು ಆಯೋಗದ ಮಾಹಿತಿ ಕೊಡದೆ ವಿಳಂಬ ಬೆಂಗಳೂರು ನಗರಪಾಲಿಕೆ ಮಟ್ಟದಲ್ಲಿ ಪೊಲೀಸ್–ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ: ಸಚಿವ ಕೃಷ್ಣ ಬೈರೇಗೌಡಕೆ.ಆರ್.ಐ.ಡಿ.ಎಲ್. ಆರೋಪ- ವರದಿ ಬಳಿಕ ಕ್ರಮ: ಸಚಿವ ಈಶ್ವರ ಖಂಡ್ರೆಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ: ಸಚಿವ ಈಶ್ವರ ಖಂಡ್ರೆಸಾಗರ ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕರ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ದಾಳಿUPI ಪಾವತಿ ವೇಳೆ ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದ್ದೀರಾ? ವಾಪಸ್ ಪಡೆಯಲು ಹೀಗೆ ಮಾಡಿ!ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಮಧ್ಯಾಹ್ನ ‘ಶಿಕ್ಷಕರ ದಿನಾಚರಣೆ’ ಆಚರಿಸಲು ಸರ್ಕಾರ ಆದೇಶBIG NEWS : ನೌಕರರ ಗ್ರಾಚ್ಯುಟಿ ಹಣದಿಂದ ಬಾಕಿ ಮೊತ್ತ ಕಡಿತಗೊಳಿಸುವಂತಿಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶಗಮನಿಸಿ : ಪ್ರತಿಯೊಬ್ಬ ಭಾರತೀಯನ ಮೊಬೈಲ್’ನಲ್ಲೂ ಇರಬೇಕಾದ 5 ಸರ್ಕಾರಿ ಆ್ಯಪ್‌ಗಳಿವು.!ಬೆಂಗಳೂರಿಗರೇ ಗಮನಿಸಿ : 4 ಫ್ಲೈ ಓವರ್ ಗಳಲ್ಲಿ ಇಂದಿನಿಂದ ಈ ವಾಹನಗಳ ಸಂಚಾರ ಸಂಪೂರ್ಣ ನಿಷೇಧ.!