LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ಆಡಿಸಲು 17 ಷರತ್ತು

ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲು ಸಜ್ಜಾಗಿದ್ದಾರೆ.

ಗೃಹ ಇಲಾಖೆ ಸಿದ್ಧಪಡಿಸಿರುವ ಈ ಷರತ್ತುಗಳ ಕುರಿತು ಕೆಎಸ್​​ಸಿಎ ಪದಾಧಿಕಾರಿಗಳು ಗೃಹ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಕೆಎಸ್​​ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ತಂಡ ಗೃಹ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಲಿದೆ. ಪೊಲೀಸ್ ಕಮಿಷನರ್ ಅವರು ನ್ಯಾ. ಮೈಕಲ್ ಡಿ‌ ಕುನ್ಹಾ ಸಮಿತಿ ವರದಿಯ ಶಿಫಾರಸುಗಳನ್ನು ಆಧರಿಸಿ, ಕಾಲ್ತುಳಿತದಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಈ 17 ಷರತ್ತುಗಳನ್ನು ವಿಧಿಸಿದ್ದಾರೆ. ಕೆಎಸ್​​ಸಿಎ ಈ ಷರತ್ತುಗಳನ್ನು ಈಡೇರಿಸಿದ ತಕ್ಷಣವೇ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದು ಎಂದು ತಿಳಿದುಬಂದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ವೇಳೆಗೆ ಎಲ್ಲವರೂ ಸರಿಯಾಗುವ ನಿರೀಕ್ಷೆ ಇದೆ.



ಮಾರ್ಗಸೂಚಿಗಳಲ್ಲಿನ ಪ್ರಮುಖ ಅಂಶಗಳೆಂದರೆ, ಸ್ಟೇಡಿಯಂ ಒಳಗೆ ಮತ್ತು ಹೊರಗೆ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಗಳ ಸುಧಾರಣೆ. ಪ್ರಸ್ತುತ, ಟಿಕೆಟ್ ವಿತರಣೆ ಮತ್ತು ಪ್ರೇಕ್ಷಕರ ಕ್ಯೂಗಳು ಫುಟ್​ಪಾತ್​​​ಗಳ ಮೇಲೆ ನಡೆಯುತ್ತಿದ್ದು, ಇದು ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತದೆ. ಇದನ್ನು ತಪ್ಪಿಸಲು ಪ್ರತ್ಯೇಕ ಸ್ಥಳಗಳನ್ನು ಗುರುತಿಸಬೇಕು. ಸಾರ್ವಜನಿಕರ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು. ಹಾಗೆಯೇ, ಸ್ಟೇಡಿಯಂನ ಎಲ್ಲಾ ಗೇಟ್‌ಗಳನ್ನು ಕನಿಷ್ಠ ಆರು ಅಡಿ ಅಗಲಕ್ಕೆ ವಿಸ್ತರಿಸಬೇಕು. ಸದ್ಯದ ಕಿಕ್ಕಿರಿದ ಗೇಟ್‌ಗಳು ಮತ್ತು ಅಸಮವಾದ ಪ್ರವೇಶ ಮಾರ್ಗಗಳು ಅಪಾಯವನ್ನುಂಟುಮಾಡುತ್ತವೆ. ಇದಲ್ಲದೆ, ಅಗ್ನಿಶಾಮಕ ಸುರಕ್ಷತೆಗಾಗಿ ಪ್ರತ್ಯೇಕ ನಿರ್ಗಮನ ದ್ವಾರಗಳನ್ನು ಕಡ್ಡಾಯಗೊಳಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಸ್ಟೇಡಿಯಂ ಒಳಗೆ ಪ್ರತ್ಯೇಕ ಸೌಲಭ್ಯಗಳನ್ನು ಒದಗಿಸಬೇಕು. ಸ್ಟೇಡಿಯಂ ಒಳಗೆ ಪ್ರವೇಶಿಸುವ ಪ್ರೇಕ್ಷಕರ ನೈಜ-ಸಮಯದ ಸಂಖ್ಯೆಯನ್ನು (ರಿಯಲ್ ಟೈಮ್ ಕೌಂಟ್) ನಿಖರವಾಗಿ ಇಟ್ಟುಕೊಳ್ಳುವ ವ್ಯವಸ್ಥೆ ಜಾರಿಗೆ ತರಬೇಕು. ಟಿಕೆಟ್‌ಗಳನ್ನು ಸ್ಟೇಡಿಯಂ ಒಳಗೆ ವಿತರಿಸಲು ಪ್ರತ್ಯೇಕ ಸ್ಥಳಗಳನ್ನು ಗೊತ್ತುಪಡಿಸಬೇಕು. ಸ್ಟೇಡಿಯಂ ಸುತ್ತಲಿನ ಪಾರ್ಕಿಂಗ್, ಪಿಕ್‌ಅಪ್ ಮತ್ತು ಡ್ರಾಪ್ ವ್ಯವಸ್ಥೆಗಳನ್ನು ಸುಧಾರಿಸಬೇಕು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026