K2kannadanews.in
https://youtu.be/6-JcE7tdxAw?si=97AMW_gKcnqs5ryh
Meat sick ಲಿಂಗಸೂಗೂರು : ದೇವರ ಕಾರ್ಯಕ್ಕೆ ಮಾಡಿದ ಮಾಂಸದೂಟ ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಪರಂಪೂರ ತಾಂಡಾದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ. ದೇವರ ಕಾರ್ಯಕ್ಕೆಂದು ಮಾಡಿದ್ದ ಮಾಂಸಾಹಾರ ಸೇವಿಸಿದ್ದ ನಂತರ ಹಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಪರಿಣಾಮ 20ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಬುಧವಾರ ಮಧ್ಯಾಹ್ನದ ಊಟದ ನಂತರ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು, ಹಿರಿಯರು ಸೇರಿ ಸುಮಾರು 10ಜನ ಹೆಚ್ಚು ಅಸ್ವಸ್ಥರಾಗಿದ್ದಾರೆ.
https://youtu.be/OK0SeYw3U4w?si=1KGbsdUNtHESIn0f
ತೀವ್ರ ಅಸ್ವಸ್ಥಗೊಂಡ 10 ಜನರನ್ನು ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದವರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.