LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2000 ರೂ. ನೋಟಿನ ಬಗ್ಗೆ ಮತ್ತೊಂದು ಪ್ರಕಟಣೆ ಹೊರಡಿಸಿದ ಆರ್‌ಬಿಐ!

ನವದೆಹಲಿ: ಎರಡು ಸಾವಿರ ರೂಪಾಯಿ ನೋಟುಗಳನ್ನು ಹಿಂಪಡೆಯುವುದಾಗಿ ಆರ್‌ಬಿಐ ಇದೇ ವರ್ಷ ಮೇ 19ರಂದು ಸುತ್ತೋಲೆ ಹೊರಡಿಸಿತ್ತು. ಇದೀಗ ಮತ್ತೊಂದು ಪ್ರಕಟಣೆ ಹೊರಡಿಸಿದ್ದು, ಆದಷ್ಟು ಬೇಗ 2000 ಮುಖಬೆಲೆಯ ನೋಟು ಹಿಂತಿರುಗಿಸುವಂತೆ ಮನವಿ ಮಾಡಿದೆ.

2023ರ ಮಾರ್ಚ್ 31ಕ್ಕೆ 3.62 ಲಕ್ಷ ಕೋಟಿ ರೂಪಾಯಿಯಷ್ಟಿದ್ದ 2 ಸಾವಿರ ರೂ ನೋಟುಗಳು ಮೇ 19ಕ್ಕೆ 3.56 ಲಕ್ಷ ಕೋಟಿ ರೂ.ಗೆ ಇಳಿದಿತ್ತು. ಜು. 31ರ ಅಂಕಿ-ಅಂಶದಂತೆ ಎಲ್ಲ ಬ್ಯಾಂಕ್​ಗಳಿಗೆ ಒಟ್ಟು 3.14 ಲಕ್ಷ ಕೋಟಿ ಮೊತ್ತದ 2 ಸಾವಿರ ರೂ. ನೋಟುಗಳು ವಾಪಸ್ ಬಂದಿವೆ.

ಅಂದರೆ ಮೇ 19ರ ವರೆಗೆ ಹೊರಗಡೆ ಚಲಾವಣೆಯಲ್ಲಿದ್ದ 2 ಸಾವಿರ ರೂ. ನೋಟುಗಳ ಪೈಕಿ ಶೇ. 88 ಬ್ಯಾಂಕ್​ಗೆ ಮರಳಿಸಲ್ಪಟ್ಟಿವೆ. ಅರ್ಥಾತ್​, 0.42 ಲಕ್ಷ ಕೋಟಿ ರೂ. ಮೊತ್ತದ 2 ಸಾವಿರ ರೂ. ನೋಟುಗಳು ಇನ್ನೂ ಚಲಾವಣೆಯಲ್ಲಿವೆ.

ವಾಪಸ್​ ಬಂದಿರುವ ನೋಟುಗಳ ಪೈಕಿ ಶೇ. 87 ಠೇವಣಿ ರೂಪದಲ್ಲಿ ಹಾಗೂ ಶೇ. 13 ವಿನಿಮಯ ರೂಪದಲ್ಲಿ ಸಂಗ್ರಹಗೊಂಡಿವೆ. ಅದಾಗ್ಯೂ ಇನ್ನೂ 0.42 ಲಕ್ಷ ಕೋಟಿ ರೂ. ಮೊತ್ತದ 2 ಸಾವಿರ ರೂ. ನೋಟುಗಳು ಚಲಾವಣೆಯಲ್ಲಿದ್ದು, ಅವುಗಳೂ ಬ್ಯಾಂಕ್​ಗೆ ಮರಳಬೇಕಾಗಿವೆ. ಹೀಗೆ 2 ಸಾವಿರ ರೂ. ನೋಟು ಹಿಂದಿರುಗಿಸಲು ಸೆ. 30 ಕಡೇ ದಿನವಾಗಿದ್ದು,

ಕೊನೆಯ ಹಂತದ ಗಡಿಬಿಡಿ ಜನಜಂಗುಳಿಯನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರು ಆದಷ್ಟು ಬೇಗ 2 ಸಾವಿರ ರೂ. ನೋಟುಗಳನ್ನು ಬ್ಯಾಂಕ್​ಗಳಿಗೆ ಹಿಂದಿರುಗಿಸಬೇಕು ಎಂದು ಆರ್​ಬಿಐ ಮನವಿ ಮಾಡಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.