LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

22ನೇ ವಯಸ್ಸಿಗೆ ಸಾಧನೆ; ಐಪಿಎಸ್ ಅಧಿಕಾರಿಯಾದ ಸಫಿನ್ ಹಸನ್

ಸಫಿನ್ ಹಸನ್ 22ನೇ ವಯಸ್ಸಿಗೆ ಯುಪಿಎಸ್ಸಿ ಪರೀಕ್ಷೆ ಬರೆದು ಐಪಿಎಸ್ ಅಧಿಕಾರಿಯಾದ ಘಟನೆ ಗುಜರಾತ್‌ನ ಪಾಲನ್ ಪುರಿಯ ಕನೋದರ್‌ನಲ್ಲಿ ನಡೆದಿದೆ.

ಸಫಿನ್ ತಂದೆ-ತಾಯಿ ವಜ್ರ ಖನಿಜ ಕಂಪನಿಯೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ 2000 ದಲ್ಲಿ ತಂದೆ-ತಾಯಿ ಕೆಲಸವನ್ನು ಕಳೆದುಕೊಂಡ ಬಳಿಕ ಕುಟುಂಬ ತುಂಬಾ ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗಿ ಬಂತು. ಸಫಿನ್ ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದಾಗಿ ಶಾಲೆಯು ಅವರ 11 ಮತ್ತು 12 ನೇ ತರಗತಿಗಳ ಶುಲ್ಕವನ್ನು ಮನ್ನಾ ಮಾಡಿತ್ತು. ನಿತ್ಯ ಬೆಳಗ್ಗೆ ಸಫನ್ ತಾಯಿ ಬೇರೆಯವರ ಮನೆಗೆ ಅಡುಗೆ ಕೆಲಸಕ್ಕೆ ತೆರಳಿ, ತಂದೆ ಇಟ್ಟಿಗೆಗಳನ್ನು ಸಾಗಿಸುವ ಕೆಲಸ ಮಾಡುತ್ತಿದ್ದರು.ಅಲ್ಲದೇ , ಪ್ರತೀ ರಾತ್ರಿ ವೇಳೆ ಅಂಗಡಿಯಲ್ಲಿ ಬೇಯಿಸಿದ ಮೊಟ್ಟೆಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಕುಟುಂಬದವರು ಭೋಧನಾ ಶುಲ್ಕ ನೀಡಿದ ಕಾರಣ ಸಫೀನ್ ಇಂಜಿನಿಯರಿಂಗ್ ಪೋರ್ಣಗೊಳಿಸಿದರು.

ಚಿಕ್ಕ ವಯಸ್ಸಿನಿಂದಲೇ ದೊಡ್ಡ ಅಧಿಕಾರಿಯಾಗುವ ಕನಸು ಕಂಡಿದ್ದ ಸಫೀನ್, ಶಾಲಾ, ಕಾಲೇಜುಗಳಲ್ಲಿ ಉತ್ತಮವಾಗಿ ವ್ಯಾಸಂಗ ಮಾಡುತ್ತಿದ್ದರು. 2017ರಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯಲು ಹೋಗುವಾಗ ದಾರಿ ಮಧ್ಯೆ ಭೀಕರ ಅಪಘಾತವಾಗಿ ಗಾಯಗೊಂಡಿದ್ದರೂ, ಎದೆಗುಂದದೆ ಪರೀಕ್ಷೆಗೆ ಹಾಜರಾಗಿದ್ದರು.

ತನ್ನ ಜೀವನದಲ್ಲಿ ಇಷ್ಟೆಲ್ಲಾ ಘಟನೆಗಳು ನಡೆದರೂ ದೃತಿಗೆಡದೆ ಸಫಿನ್ ಹಸನ್ 2018 ರಲ್ಲಿ 2ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದರು. ಶ್ರಮಕ್ಕೆ ಪ್ರತಿಫಲವಾಗಿ 570 ನೇ ರ್‍ಯಾಂಕ್ ಗಳಿಸಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ನಂತರ 2019ರ ಡಿಸೆಂಬರ್ 23ರಂದು ಜಾಮ್‌ನಗರ ಜಿಲ್ಲೆಯಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ್ದು, ಇದೀಗ ಐಪಿಯಸ್ ಅಧಿಕಾರಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್