LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

38ನೇ ರಾಷ್ಟ್ರೀಯ ಟೆಕ್ವೆಂಡೋ ಚಾಂಪಿಯನ್ ಶಿಪ್ ಕ್ರೀಡಾಕೂಟ

ಬೆಂಗಳೂರು: ಇತರೆ ಕ್ರೀಡೆಗಳಂತೆ ಟೆಕ್ವೆಂಡೋ ಕ್ರೀಡಾಕೂಟ ಹಿಂದಿನ ಪ್ರಸ್ಥ ದಿನಗಳಿಗೆ ಬಹಳ ಮುಖ್ಯವಾದ ಕ್ರೀಡಾಕೂಟದ ಜೊತೆಗೆ ಒಂದು ಕಲೆಯಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಆತ್ಮ ರಕ್ಷಣ ಕಲೆ ಕಲಿಯುವುದು ಬಹಳ ಮುಖ್ಯ ಎಂದು ಕರ್ನಾಟಕ ಟೆಕ್ವೆಂಡೋ ಸಂಸ್ಥೆಯ ಕಾರ್ಯದರ್ಶಿ ಮಾಸ್ಟರ್ ಪ್ರದೀಪ್ ಜನಾರ್ದನ್ ತಿಳಿಸಿದರು.

38ನೇ ರಾಷ್ಟ್ರೀಯ ಟೆಕ್ವಿಂಡು ಚಾಂಪಿಯನ್ ಶಿಪ್ ಕ್ರೀಡಾಕೂಟವನ್ನು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಡಿ.28ರಿಂದ 30ರ ವರೆಗೆ 3 ದಿನಗಳ ಕಾಲ ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಪುಟಾಣಿ ಮಕ್ಕಳಿಂದ ಹಿಡಿದು ವಯಸ್ಕರ, ಯುವಕರು ಈ ಒಂದು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. 

ವಿವಿಧ ರಾಜ್ಯಗಳಿಂದ ನೂರಾರು ತಂಡಗಳು ರಾಷ್ಟ್ರಮಟ್ಟದ ಈ ಒಂದು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ, ಮಕ್ಕಳು ಬಾರಿ ತಮ್ಮ ಕಲೆಯನ್ನು ರಿಂಗ್ ಮೇಲೆ ಪ್ರದರ್ಶನ ಮಾಡುತ್ತಿದ್ದಾರೆ, ಡಿಸೆಂಬರ್ 30ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಟೆಕ್ವೆಂಡೋ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಂತಹ ಮಕ್ಕಳಿಗೆ ಪ್ರಶಸ್ತಿ ಪ್ರಧಾನವನ್ನು ಸಹ ಮಾಡಲಿದ್ದಾರೆ ಎಂದು ತಿಳಿಸಿದರು.

ಒಂದು ಕ್ರೀಡಾಕೂಟವನ್ನು ಭಾರತ, ನವದೆಹಲಿಯ ಟೆಕ್ವೆಂಡೋ ಸಂಸ್ಥೆಯ ಸಹಕಾರ ಹಾಗೂ ಕರ್ನಾಟಕ ಟೆಕ್ವೆಂಡೋ ಸಂಸ್ಥೆಯಿಂದ ಆಯೋಜನೆ ಮಾಡಲಾಗಿದೆ. ಕರ್ನಾಟಕದ ಮಕ್ಕಳು ಈಗಾಗಲೇ ಬೇರೆ ಬೇರೆ ರಾಜ್ಯ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇರೆ ಬೇರೆ ದೇಶಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಪದಕಗಳನ್ನು ಗೆದ್ದುಕೊಂಡು ಬಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು.

ಮೂರು ದಿನಗಳ ಕಾಲ ನಡೆದ ಟೆಕ್ವೆಂಡೋ ಕ್ರೀಡಾಕೂಟದಲ್ಲಿ ಗೆದ್ದಂತಹ ಮಕ್ಕಳಿಗೆ ಗಣ್ಯರು ಫಲಕಗಳನ್ನು ನೀಡಿ ಗೌರವಿಸಲಾಯಿತು.

ಇನ್ನೂ ಕಾರ್ಯಕ್ರಮಕ್ಕೆ ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ ಗೌರೀಶ್, ಬ್ಯಾಟರಾಯನಪುರ ಮಾಜಿ ಸಿಎಂಸಿ ಅಧ್ಯಕ್ಷ ಹನುಮಂತೆಗೌಡ, ಕುವೆಂಪು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸಯ್ಯ, ಕರ್ನಾಟಕ ಅಮೆಚೂರ್ ಕಬಡ್ಡಿ ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಮುನಿರಾಜ್, ಸಮಾಜಸೇವಕ ವೆಂಕಟೇಶ್ ,ಅಮೃತಳ್ಳಿ pld ಬ್ಯಾಂಕ್ ನ ಅಧ್ಯಕ್ಷ ಶ್ರೀಧರ್ ,ನಿವೃತ್ತಪ್ಪ ಡಿವೈಎಸ್ಪಿ ಮುನಿವೆಂಕಟಪ್ಪ ಸೇರಿ ಇದರರೂ ಉಪಸ್ಥಿರಿದ್ದರು.

ಕಾರ್ಯಕ್ರಮದಲ್ಲಿ ಭಾರತೀಯ ಟೆಕ್ವೆಂಡೋ ಸಂಸ್ಥೆಯ ಅಧ್ಯಕ್ಷ ವಕೀಲ, ಗ್ರಾಂಡ್ ಮಾಸ್ಟರ್ ಡಾ. ರಾಜೇಂದ್ರನ್ ಬಾಲನ್, ಉಪಾಧ್ಯಕ್ಷ ಮಾಸ್ಟರ್ ನರೇಂದ್ರ ಸಿಂಗ್ ರಾವತ್, ಮಾಸ್ಟರ್ ಅಬುದುರಹಿಮಾನ್ ಮಂಗಳಸರಿ, ಭಾರತ- ನವದೆಹಲಿಯ ಟಿಎಐ ನ ಕಾರ್ಯದರ್ಶಿ ಮಾಸ್ಟರ್ ರಚನಾ ಚೌರಾಸಿಯ ರಾಜೇಂದ್ರನ್ ಸೇರಿ ಇನ್ನಿತರರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭ