LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಡಿಕೆ ಶಿವಕುಮಾರ್‌ ನಿರ್ದೇಶನ ಮುಂಬರುವ ಬೇಸಿಗೆಯ ತಯಾರಿ ಚುರುಕು

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿರ್ದೇಶನದಂತೆ ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ಸಮಸ್ಯೆಗಳ ಸಮರ್ಥ ನಿರ್ವಹಣೆಗೆ ಬೆಂಗಳೂರು ಜಲಮಂಡಳಿ ನೀರು ಸರಬರಾಜು ಮತ್ತು ಸರಬರಾಜು ಮಂಡಳಿ ಸಜ್ಜಾಗುತ್ತಿದೆ. ನಗರದ ಹೊರ ಪ್ರದೇಶಗಳಲ್ಲಿ ಅಂತರ್ಜಲದ ಮೇಲಿನ *ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶೇಷ ಕಾವೇರಿ ಸಂಪರ್ಕ ಅಭಿಯಾನವನ್ನು ನಡೆಸುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.



ಇಂದು ನಗರದ ಪೂರ್ವಭಾಗದ ಸೇವಾಠಾಣೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿದವರಿಗೆ ಹೊಸ ಸಂಪರ್ಕ ವಿತರಿಸಿದರು. ನಂತರ ಬೆಂಗಳೂರು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಕಳೆದ ಬಾರಿ ಬೇಸಿಗೆಯ ಸಂಧರ್ಭದಲ್ಲಿ ಲಭ್ಯವಿದ್ದಂತಹ ನೀರಿನ ಬಳಕೆಯ ಮೂಲಕ ಸಮರ್ಪಕವಾಗಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಅಪಾರ್ಟ್‌ಮೆಂಟ್‌ ಫೆಡರೇಷನ್‌ ಸಹಕಾರ ನೀಡಿದೆ. ಕಾವೇರಿ ಐದನೇ ಹಂತದ ಅನುಷ್ಠಾನದ ಬಳಿಕ ಬೆಂಗಳೂರು ಜಲಮಂಡಳಿಯ ಬಳಿ ಸಾಕಷ್ಟು ನೀರು ಲಭ್ಯವಿದೆ. ಈ ಲಭ್ಯವಿರುವ ನೀರನ್ನು ಅಪಾರ್ಟ್‌ಮೆಂಟ್‌ಗಳಿಗೆ ಸರಬರಾಜು ಮಾಡಲು ಜಲಮಂಡಳಿ ಸಿದ್ದವಿದೆ. ಕಾವೇರಿ ನೀರಿನ ಸಂಪರ್ಕ ಅಭಿಯಾನದ ಮೂಲಕ ಈಗಾಗಲೇ 2643 ಅಪಾರ್ಟ್‌ಮೆಂಟ್‌ಗಳಿಂದ ಅರ್ಜಿ ಸಲ್ಲಿಕೆಯಾಗಿದೆ. ಇವುಗಳೀಗೆ ಈಗಾಗಲೇ ಡಿಮ್ಯಾಂಡ್‌ ನೋಟೀಸ್‌ ಜಾರಿಗೊಳಿಸಲಾಗಿದೆ. ಇನ್ನು ಸುಮಾರು 1252 ಅಪಾರ್ಟ್‌ಮೆಂಟ್‌ ಗಳು ಅರ್ಜಿ ಸಲ್ಲಿಸಿಲ್ಲ. ಅರ್ಜಿ ಸಲ್ಲಿಸಿರುವ ಹಾಗೂ ಅರ್ಜಿ ಸಲ್ಲಿಸದೇ ಇರುವಂತಹ ಅಪಾರ್ಟ್‌ಮೆಂಟ್‌ಗಳ ಪಟ್ಟಿಯನ್ನು ನೀಡಲಾಗುವುದು. ಡಿಮ್ಯಾಂಡ್‌ ನೋಟೀಸ್‌ ನೀಡಿರುವ ಅಪಾರ್ಟ್‌ಮೆಂಟ್‌ಗಳಿಗೆ ಹಣ ಪಾವತಿಸುವಂತೆ ಹಾಗೂ ಅರ್ಜಿ ಸಲ್ಲಿಸದೇ ಇರುವ ಅಪಾರ್ಟ್‌ಮೆಂಟ್‌ಗಳಿಗೆ ಅರ್ಜಿ ಸಲ್ಲಿಸುವಂತೆ ಅಗತ್ಯ ಮಾಹಿತಿ ನೀಡುವಂತೆ ಜಲಮಂಡಳಿ ಅಧ್ಯಕ್ಷರು ಪದಾಧಿಕಾರಿಗಳಿಗೆ ಸೂಚನೆ ನೀಡಿದರು.

*ವಿಶೇಷ ಕಾವೇರಿ ಸಂಪರ್ಕ ಅಭಿಯಾನ:*

ನಗರದ ಹೊರ ಪ್ರದೇಶಗಳಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ಹೆಚ್ಚಾಗಿದೆ. ಬೇಸಿಗೆಯ ಸಂಧರ್ಭದಲ್ಲಿ ಅಂತರ್ಜಲ ಕುಸಿಯವ ಬಗ್ಗೆ ಐಐಎಸ್‌ಸಿ ವರದಿ ತಿಳಿಸಿದೆ. ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಡಿಸಿಎಂ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಕೊಳಚೆ ಪ್ರದೇಶಗಳು, ಜನಸಾಂದ್ರಿತ ಪ್ರದೇಶಗಳು ಹಾಗೂ ಅಪಾರ್ಟ್‌ಮೆಂಗಳಿಗೆ ಕಾವೇರಿ ಸಂಪರ್ಕ ನೀಡುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂಬರುವ ಬೇಸಿಗೆಯ ಬವಣೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಈಗಾಗಲೇ ಕಾರ್ಯ ಪ್ರಾರಂಭಿಸಿದೆ. ಸಾರ್ವಜನಿಕರು ಜಲಮಂಡಳಿಗೆ ಸಹಕಾರ ನೀಡಬೇಕು ಎಂದು ಅಧ್ಯಕ್ಷರು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ