LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಡಿ.ಕೆ. ಶಿವಕುಮಾರ್ ರವರಿಂದ ಜಿ.ಬಿ.ಎ ನಾಮಫಲಕ ಅನಾವರಣ, ಪ್ರತಿಮೆಗಳಿಗೆ ಪುಷ್ಪಾರ್ಪಣೆ

ಬೆಂಗಳೂರು: “ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

“ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು. ಈಗ 500 ವಾರ್ಡ್ ಗಳ ರಚನೆಯ ಅನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಾಲಿಕೆಗಳ ಆಡಳಿತಾತ್ಮಕ ವೆಚ್ಚ, ಸಂಬಳ ಹಾಗೂ ನಿವೃತ್ತಿ ವೇತನಕ್ಕೆ ಎಂದು ಬಿಬಿಎಂಪಿಯಿಂದ ಸುಮಾರು 300 ಕೋಟಿ ರೂ. ಹಣ ಬಿಡುಗಡೆಗೆ ಮಾಡಲಾಗುವುದು” ಎಂದರು.

“ನಾಗರಿಕರು, ವಾಸ್ತುಶಿಲ್ಪಿಗಳು ಪಾಲಿಕೆ ಕಚೇರಿಗಳ ವಿನ್ಯಾಸ ಹೇಗಿರಬೇಕು ಎಂದು ಸಲಹೆ ನೀಡಬಹುದು. ಜೊತೆಗೆ ವಿನ್ಯಾಸಗಳನ್ನು ಸಹ ನೀಡಬಹುದು. ಇದರಲ್ಲಿ ಅತ್ಯುತ್ತಮ ಮೂರು ಅಥವಾ ಐದು ವಿನ್ಯಾಸಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು” ಎಂದರು.

“ಪ್ರತಿ ಪಾಲಿಕೆಗಳಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು, ಒಬ್ಬರು ಕೆಎಎಸ್, ಇಬ್ಬರು ಮುಖ್ಯ ಎಂಜಿನಿಯರ್ ಗಳು ಹಾಗೂ ಅಗತ್ಯ ಕಚೇರಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಬೆಂಗಳೂರು ನಗರಕ್ಕೆ ಉತ್ತಮವಾದ ಆಡಳಿತ ಹಾಗೂ ಜನರ ಬಾಗಿಲಿಗೆ ಸರ್ಕಾರವನ್ನು ತೆಗೆದುಕೊಂಡು ಹೋಗಬೇಕು ಎಂದು ನಿರ್ಣಯಗಳನ್ನು ತೆಗೆದುಕೊಂಡು ಪಾಲಿಕೆಗಳು ಕೆಲಸ ಮಾಡಲಿವೆ. ಪಾಲಿಕೆಗಳ ವ್ಯಾಪ್ತಿಗೆ ಬರುವ ರಸ್ತೆ, ಚರಂಡಿ ಸೇರಿದಂತೆ ಇತರೇ ಸಂಗತಿಗಳನ್ನು ಗುರುತಿಸುವ ಕೆಲಸವಾಗಲಿದೆ” ಎಂದು ಹೇಳಿದರು.

ಹೊಸ ಪ್ರದೇಶಗಳನ್ನು ಐದು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ, “ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಸ್ಥಳೀಯ ಸಂಸ್ಥೆಗಳನ್ನು ಜಿಬಿಎ ವ್ಯಾಪ್ತಿಗೆ ಈಗಲೇ ಸೇರಿಸಿದರೆ ಪ್ರಸ್ತುತ ಪ್ರತಿನಿಧಿಗಳಾಗಿರುವವನ್ನೂ ಪಾಲಿಕೆ ಸದಸ್ಯರು ಎಂದು ಪರಿಗಣಿಸಬೇಕಾಗುತ್ತದೆ. ಮೊದಲು ಈಗ ರಚನೆಯಾಗಿರುವ ಪಾಲಿಕೆಗಳಿಗೆ ಚುನಾವಣೆ ನಡೆದ ನಂತರ ಇತರೇ ಪ್ರದೇಶಗಳ ವಿಲೀನದ ಬಗ್ಗೆ ಭವಿಷ್ಯದಲ್ಲಿ ಯೋಚಿಸಲಾಗವುದು” ಎಂದರು.

ನೂತನ ಆಯುಕ್ತರುಗಳ ಜವಾಬ್ದಾರಿಗಳ ಬಗ್ಗೆ ಕೇಳಿದಾಗ, “ನೂತನ ಆಯುಕ್ತರುಗಳು ಜನರ ನಡುವೆಯಿದ್ದು ಕೆಲಸ ಮಾಡಬೇಕು. ಜಿಬಿಎ ಆಯುಕ್ತರು ಫುಟ್ ಪಾತ್, ನೀರು, ರಸ್ತೆ ಸೇರಿದಂತೆ ಇತರೇ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ದಿನಕ್ಕೆ 17- 18 ಗಂಟೆ ಕೆಲಸ ಮಾಡಬೇಕಾಗುತ್ತದೆ. ಆದ ಕಾರಣಕ್ಕೆ ಹಿರಿಯ ಅಧಿಕಾರಿಗಳ ಜೊತೆ ಯುವ ಅಧಿಕಾರಿಗಳನ್ನೂ ನಿಯೋಜನೆ ಮಾಡಲಾಗಿದೆ” ಎಂದರು.

"ಮಹೇಶ್ವರ್ ರಾವ್ ಅವರು ಜಿಬಿಎಗೆ ಮುಖ್ಯ ಆಯುಕ್ತರಾಗಿ ಹಾಗೂ ಆಡಳಿತಾಧಿಕಾರಿಯಾಗಿ ಚುನಾವಣೆ ನಡೆಯುವವರೆಗೂ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಪ್ರಾಧಿಕಾರದ ಸಮಿತಿಗೆ 75 ಸದಸ್ಯರನ್ನು ನೇಮಕ ಮಾಡಲಾಗಿದೆ" ಎಂದು ತಿಳಿಸಿದರು.

*ಉತ್ತಮ ಪದ ಸಿಕ್ಕರೆ ಹೆಸರು ಬದಲಾವಣೆ*

ಗ್ರೇಟರ್ ಬೆಂಗಳೂರು ಎಂದು ಇಂಗ್ಲಿಷ್ ಹೆಸರಿಟ್ಟಿರುವ ಬಗ್ಗೆ ಶಾಸಕ ಅಶ್ವಥನಾರಾಯಣ ಅವರ ಆಕ್ಷೇಪದ ಬಗ್ಗೆ ಕೇಳಿದಾಗ, “ಅವರನ್ನೇ ಯಾವ ಹೆಸರು ಇಡಬೇಕು ಎಂದು ಸಲಹೆ ಕೇಳುತ್ತೇನೆ. ಮುಂಬೈ ಸೇರಿದಂತೆ ಬೇರೆ ಕಡೆಯು ಇದೇ ಪರಿಸ್ಥಿತಿ ಬಂದಿತ್ತು. ಮಾತೃಭಾಷೆಯನ್ನು ಕಡೆಗಣಿಸುವ ಮಾತಿಲ್ಲ. ಆದರೆ ಒಳ್ಳೆ ಪದ ಸಿಕ್ಕರೆ ಬದಲಾವಣೆ ಮಾಡೋಣ” ಎಂದರು.

"ಬೆಂಗಳೂರಿನ ಸಮಸ್ಯೆಗಳು ದಿನ ಬೆಳಗಾಗುವುದರಲ್ಲಿ ಬಗೆಹರಿಯುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ನಾವು ಬಗೆಹರಿಸುವ ವಿಶ್ವಾಸವಿದೆ. ಕುಡಿಯುವ ನೀರು, ರಸ್ತೆ ಗುಂಡಿ, ಸಂಚಾರ ದಟ್ಟಣೆ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಲಾಗುವುದು" ಎಂದರು.

ಜಿಬಿಎಯಿಂದ ಬೆಂಗಳೂರು ಅಭಿವೃದ್ಧಿ ಸಾಧ್ಯವೇ ಎಂದು ಕೇಳಿದಾಗ, "ಖಂಡಿತವಾಗಿಯೂ ಸಾಧ್ಯವಾಗಲಿದೆ. ಸಾರ್ವಜನಿಕರು ಸಹ ಪಾಲಿಕೆಗಳ ಜೊತೆ ಕೈ ಜೋಡಿಸಬೇಕು. ಆಗ ಮಾತ್ರ ಪಾರದರ್ಶಕ ಆಡಳಿತ ನಡೆಸಲು ಸಾಧ್ಯವಾಗುತ್ತದೆ. ಜನರು ಪ್ರಾಮಾಣಿಕವಾಗಿ ತಮ್ಮ ಆಸ್ತಿಗಳನ್ನು ಘೋಷಣೆ ಮಾಡಿಕೊಳ್ಳಬೇಕು, ತೆರಿಗೆ ಪಾವತಿ ಮಾಡಬೇಕು" ಎಂದರು.

ಜಿಬಿಎಯ ಕಾರ್ಯನಿರ್ವಹಣೆ ಏನೆಂದು ಕೇಳಿದಾಗ, "ಬಿಬಿಎ ಕೇವಲ ಉಸ್ತುವಾರಿ ನೋಡಿಕೊಳ್ಳುತ್ತದೆ. ಮಿಕ್ಕ ಎಲ್ಲಾ ಸಂಗತಿಗಳು ಪಾಲಿಕೆಗಳ ವ್ಯಾಪ್ತಿಗೆ ಬರಲಿದೆ" ಎಂದು ತಿಳಿಸಿದರು.

ಉದ್ಘಾಟಿಸಿದರು.

ಈ ವೇಳೆ ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಶಾಸಕರಾದ ರವಿ ಸುಬ್ರಮಣ್ಯ, ಉದಯ್ ಗರುಡಾಚಾರ್, ಎಸ್.ಟಿ ಸೋಮಶೇಖರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ ಹರೀಶ್ ಕುಮಾರ್,

ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ನಗರ ಪಾಲಿಕೆಗಳ ಆಯುಕ್ತರುಗಳಾದ ರಮೇಶ್ ಡಿ.ಎಸ್, ಕೆ.ಎನ್ ರಮೇಶ್, ಪೊಮ್ಮಲ ಸುನೀಲ್ ಕುಮಾರ್, ರಾಜೇಂದ್ರ ಕೆ.ವಿ, ಅಪರ ಆಯುಕ್ತರು (ಅಭಿವೃದ್ಧಿ) ಆದ ಲತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ