Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : 
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

 ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಘಾಟಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 66 ನೂತನ ಜೋಡಿಗಳು ಸತಿ-ಪತಿಗಳಾದರು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಸಮ್ಮುಖದಲ್ಲಿ ನೂತನ ವಧು-ವರರಿಗೆ ಆಶೀರ್ವದಿಸಿ ಶುಭ ಹಾರೈಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಶುಭ ಲಗ್ನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ. ಈ ಪುಣ್ಯ ಕಾರ್ಯಕ್ರಮಕ್ಕೆ ಬಂದಿರುವುದು ನನಗೂ ಹೆಮ್ಮೆ ಇದೆ. ಬಡವರಿಗೆ, ಹಿಂದುಳಿದವರಿಗೆ, ಸರಳ ವಿವಾಹ ಬಯಸುವವರಿಗೆ ಈ ಸಾಮೂಹಿಕ ವಿವಾಹ ಬಹಳ ಸಹಕಾರಿಯಾಗಿದೆ.

  ಸಾಲ ಮಾಡಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಆಗುವ ಮದುವೆಗಳಿಂದ, ಮುಂದೆ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಬಹುದು. ಸರಳ ವಿವಾಹ ಆಗುವುದರಿಂದ ನೆಮ್ಮದಿಯ ಜೀವನ ನಡೆಸಬಹುದು. ದೇವರ ಸನ್ನಿದಾನದಲ್ಲಿ ನೆರವೇರಿರುವ ಈ ಸಾಮೂಹಿಕ ವಿವಾಹ ಶ್ರೇಷ್ಠವಾಗಿದೆ. ತಮಗೆ ಉತ್ತಮ ಜೀವನ, ಆರೋಗ್ಯ ಭಾಗ್ಯ, ಆಯಸ್ಸು ಕೊಟ್ಟು ದೇವರು ಕಾಪಾಡಲಿ ಎಂದು ನವ ದಂಪತಿಗಳಿಗೆ ಶುಭ ಹಾರೈಸಿದರು.

   ನವ ದಂಪತಿಗಳಾದ ತಾವು ಪ್ರೀತಿ ವಾತ್ಸಲ್ಯದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ-ತಾಯಿ, ಕುಟುಂಬವನ್ನು ಚೆನ್ನಾಗಿ ಪೋಷಿಸಿ ಉತ್ತಮ ಜೀವನ ಸಾಗಿಸಲು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಪ್ರಾಧಿಕಾರ ಹಾಗೂ ಅಧಿಕಾರಿಗಳಿಗೆ ಸಚಿವರು ಧನ್ಯವಾದ ತಿಳಿಸಿದರು. ಮಾಂಗಲ್ಯ ಭಾಗ್ಯ ಯೋಜನೆಯಡಿ ಪ್ರಾಧಿಕಾರದ ವತಿಯಿಂದ ನವ ಜೋಡಿಗೆ ತಾಳಿ, ಎರಡು ಚಿನ್ನದ ಗುಂಡು, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಗಿದೆ.



ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ರಥೊಡ್, ಇಒ ಮುನಿರಾಜು, ಪ್ರಾಧಿಕಾರದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ