LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೇ.70ರಷ್ಟು ಭಾರತೀಯರು ಫೈಬರ್‌ ಕೊರತೆಯಿಂದ ಬಳಲುತ್ತಿದ್ದಾರೆ: ವರದಿಯಲ್ಲಿ ಬಹಿರಂಗ

ಬೆಂಗಳೂರು: ಆಶೀರ್ವಾದ್‌ ಹ್ಯಾಪಿ ಟಮ್ಮಿ ವೇದಿಕೆಯು ವಿಶ್ವ ಜೀರ್ಣಕ್ರಿಯೆ ದಿನದ ಪ್ರಯುಕ್ತ ಜೀರ್ಣಕ್ರಿಯೆ ಆರೋಗ್ಯದ ಕುರಿತು ಸಮೀಕ್ಷೆ ನಡೆಸಿದ್ದು, ಶೇ.70ರಷ್ಟು ಜನರು ದೈನಂದಿನ ಆಹಾರದಲ್ಲಿ ಫೈಬರ್‌ ಕೊರತೆ ಎದುರಿಸುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಐಟಿಸಿ ಫುಡ್ಸ್ – ಸ್ಟೇಪಲ್ಸ್ ಅಂಡ್ ಅಡ್ಜಸೆನ್ಸೀಸ್ ಚೀಫ್ ಆಪರೇಟಿಂಗ್ ಆಫೀಸರ್ ಅನುಜ್ ರುಸ್ತಗಿ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ಸಾಕಷ್ಟು ಜನರು ಸೂಕ್ತ ಆಹಾರವನ್ನೇ ಸೇವಿಸುತ್ತಿಲ್ಲ. ನಾವು ನಡೆಸಿದ ಆಶೀರ್ವಾದ್ ಹ್ಯಾಪಿ ಟಮ್ಮಿ ವೇದಿಕೆಯಡಿ 8 ಲಕ್ಷಕ್ಕಿಂತ ಹೆಚ್ಚಿನ ಜನರ ಸಮೀಕ್ಷೆ ನಡೆಸಿದ್ದೇವೆ. ಈ ವರದಿಯ ಪ್ರಕಾರ 1.27 ಲಕ್ಷಕ್ಕಿಂತ ಹೆಚ್ಚು ಜನರು ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಇನ್ನು, ಶೇ.70 ರಷ್ಟು ಜನರು ಸೇವಿಸುವ ಆಹಾರದಲ್ಲಿ ನಾರಿನಾಂಶವೇ ಇರುವುದಿಲ್ಲ. ಪ್ರಮುಖವಾಗಿ ಈ ಕೊರತೆಯು ಮಹಿಳೆಯರಲ್ಲಿ ಜಾಸ್ತಿಯಿದೆ. ಶೇ. 74ರಷ್ಟು ಮಹಿಳೆಯರು ದೇಹಕ್ಕೆ ಬೇಕಾಗುವಷ್ಟು ನಾರಿನಂಶ ಸೇವಿಸುತ್ತಿಲ್ಲ. ಕಡಿಮೆ ನಾರಿನಂಶ ಸೇವಿಸುತ್ತಿರುವುದರಿಂದ ಮಲಬದ್ಧತೆಯಂತಹ ಸಾಮಾನ್ಯ ಜೀರ್ಣಕ್ರಿಯೆ ಸಮಸ್ಯೆ, ಬೊಜ್ಜು, ಟೈಪ್ 2 ಮಧುಮೇಹ ಮತ್ತು ಹೃದಯ ರಕ್ತನಾಳದ ಕಾಯಿಲೆಗಳಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಸಂಶೋಧನೆಗಳು ತಿಳಿಸಿವೆ.

ಇದಷ್ಟೇ ಅಲ್ಲದೆ, 78% ಜನರಿಗೆ ದಿನನಿತ್ಯ ಎಷ್ಟು ನಾರಿನಂಶ ಸೇವಿಸಬೇಕೆಂಬ ಅರಿವೇ ಇಲ್ಲ, ಶೇ. 74ರಷ್ಟು ಜನರು ನಿತ್ಯ ಬಹುಧಾನ್ಯಗಳನ್ನು ಸೇವಿಸುತ್ತಿಲ್ಲ. ಶೇ.69ರಷ್ಟು ಜನರು ದಿನವೊಂದಕ್ಕೆ 8 ಲೋಟಗಳಿಗಿಂತಲೂ ಕಡಿಮೆ ನೀರು ಕುಡಿಯುತ್ತಿದ್ದಾರೆ, ಶೇ. 46ರಷ್ಟು ಜನರು ದಿನಕ್ಕೆ 6 ಗಂಟೆಗಿಂತಲೂ ಕಡಿಮೆ ನಿದ್ರೆ ಮಾಡುತ್ತಿದ್ದಾರೆ. ಶೇ. 60ರಷ್ಟು ಜನರು ನಿತ್ಯ ದೈಹಿಕ ಚಟುವಟಿಕೆಗಳಲ್ಲಿ ಕೊರತೆ ಅನುಭವಿಸುತ್ತಿದ್ದಾರೆ ಎಂಬುದು ವರದಿಯಲ್ಲಿ ತಿಳಿದುಬಂದಿದೆ ಎಂದು ವಿವರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ