LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೂರನೇ ಹೆಂಡತಿಯನ್ನು ಕೊಲೆ ಮಾಡಿ ಶವ ಬಸ್ಸಿನಲ್ಲಿ ಪಾರ್ಸ್‌ಲ್‌ ಮಾಡಿದ್ದ ಆರೋಪಿ: 23 ವರ್ಷದ ಬಳಿಕ ಬಂಧನ

ಮೂರನೇ ಹೆಂಡತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಲಗೇಜ್ ಎಂದು ಬಸ್ಸಿನಲ್ಲಿ ಕಳುಹಿಸಿ 23 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.



ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಹಾಲದಾಳ ಗ್ರಾಮದ 75 ವರ್ಷದ ವೃದ್ಧ ಹನುಮಂತ ಹುಸೇನಪ್ಪ ಬಂಧಿತ ವ್ಯಕ್ತಿ. ಬಾದರ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಸಹಾಯಕ ಅಧಿಕಾರಿಯಾಗಿ ಹನುಮಂತ ಹುಸೇನಪ್ಪ ಕೆಲಸ ಮಾಡುತ್ತಿದ್ದ. ಮೊದಲ ಹೆಂಡತಿ ಸಾವು ಕಂಡ ಬಳಿಕ 2ನೇ ಮದುವೆಯಾಗಿದ್ದ. ಆದರೆ, ಗಂಡನ ಜೊತೆ ಜಗಳ ಮಾಡಿಕೊಂಡು ಈಕೆ ಬಿಟ್ಟುಹೋಗಿದ್ದಳು. ಆದರೆ, ಹನುಮಂತ ಹುಸೇನಪ್ಪ ಸರ್ಕಾರಿ ನೌಕರಿ ಇದ್ದ ಕಾರಣಕ್ಕೆ ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದ ರೇಣುಕಮ್ಮ ಹೆಸರಿನ ಮಹಿಳೆಯೊಬ್ಬರನ್ನು 3ನೇ ಮದುವೆ ಆಗಿದ್ದ. ಬಳಿಕ ಗಂಗಾವತಿ ನಗರದ ಲಕ್ಷ್ಮಿ ಕ್ಯಾಂಪಿನಲ್ಲಿ ಹೆಂಡತಿ ಜೊತೆ ವಾಸ ಮಾಡುತ್ತಿದ್ದ. 2002 ರಲ್ಲಿ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದ್ದ ಹುಸೇನಪ್ಪ, ಗೋಣಿಚೀಲದಲ್ಲಿ ಮಹಿಳೆಯ ಶವ ತುಂಬಿ ಇದರಲ್ಲಿ ಲಗೇಜ್ ಇದೆಯೆಂದೂ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಸರ್ಕಾರಿ ಬಸ್ಸಿನಲ್ಲಿ ಕಳುಹಿಸಿದ್ದ. ಆದರೆ, ಕಂಪ್ಲಿಗೆ ಹೋದ ಬಳಿಕ ಗೋಣಿ ಚೀಲದಲ್ಲಿ ಶವ ಕಂಡಿದ್ದ ಕಂಡಕ್ಟರ್‌, ಪೊಲೀಸ್ ಠಾಣೆಗೆ ಬಸ್ ತೆಗೆದುಕೊಂಡು ಹೋಗಿ ಗಂಗಾವತಿ ನಗರ ಠಾಣೆಯಲ್ಲಿ ದೂರು ನೀಡಿದ್ದರು, ಆದರೆ, ಅಷ್ಟರಲ್ಲಾಗಲೇ ಹನುಮಂತಪ್ಪ ತನ್ನ ಊರನ್ನು ಬಿಟ್ಟು, 23 ವರ್ಷಗಳಿಂದ ಅಲೆಮಾರಿಯ ರೀತಿ ಜೀವನ ಸಾಗಿಸುತ್ತಿದ್ದ. ಇತ್ತಿಚೆಗೆ ಸ್ವಗ್ರಾಮ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಾಲದಾಳ ಗ್ರಾಮಕ್ಕೆ ಬಂದಿದ್ದ ಹನುಮಂತಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026