LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

30 ವರ್ಷಗಳ ಹಿಂದೆ 500 ರೂ. ಲಂಚ ಪಡೆದ ಪ್ರಕರಣ : 10 ವರ್ಷಗಳ ನಂತರ ಶಿಕ್ಷೆ

ಬೆಳಗಾವಿ: 30 ವರ್ಷಗಳ ಹಿಂದೆ 500 ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ ವಿಧಿಸಿರುವಂತಹ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಇನ್ನೊಂದು ವಿಚಿತ್ರ ವಿಚಾರವೆಂದರೆ ದೂರುದಾರರು ಕೂಡಾ ಮೃತಪಟ್ಟು 5 ವರ್ಷಗಳೇ ಕಳೆದಿವೆ.

ನಾಗೇಶ್ ಶಿವಂಗೇಕರ್ ಜೈಲು ಶಿಕ್ಷೆಗೆ ಒಳಗಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ. ನಾಗೇಶ್ ಶಿವಂಗೇಕರ್​ 30 ವರ್ಷ ಹಿಂದೆ ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶಿವಂಗೇಕರ್ 500 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ಈ ಘಟನೆ ಸಂಬಂಧ 2006ರಲ್ಲಿ ಶಿವಂಗೇಕರ್ ಅವರಿಗೆ ಒಂದು ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ ವಿಧಿಸಲಾಗಿತ್ತು. ಬಳಿಕ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದ ನಾಗೇಶ್ ಶಿವಂಗೇಕರ್​ಗೆ ರಿಲೀಫ್ ಸಿಕ್ಕಿತ್ತು. ಆದರೆ ಹೈಕೋರ್ಟ್ ‌ಆದೇಶ ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಇಂದು ಸುಪ್ರೀಂ ಕೋರ್ಟ್ ಲೋಕಾಯುಕ್ತ ಪರ ಪರ ತೀರ್ಪು ಪ್ರಕಟಿಸಿದೆ. ಸದ್ಯ ಶಿವಂಗೇಕರ್ ನಿವೃತ್ತಿಯಾಗಿ 10 ವರ್ಷಗಳ ಬಳಿಕ ಈಗ ಜೈಲುಪಾಲಾಗಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿಗೆ ನಾಗೇಶ್ ಶಿವಂಗೇಕರ್​​ನ್ನು ಲೋಕಾಯುಕ್ತ ಪೊಲೀಸರು ರವಾನಿಸಿದ್ದಾ ರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026