Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬೆಳಗಾವಿಯಲ್ಲಿ ಜನಿಸಿದ್ದ ಖ್ಯಾತ ನಟ ಶವವಾಗಿ ಪತ್ತೆ

 

ಪುಣೆ :
ಬೆಳಗಾವಿಯಲ್ಲಿ ಜನಿಸಿದ್ದ ಖ್ಯಾತ ನಟ ಶವವಾಗಿ ಪತ್ತೆಯಾಗಿದ್ದು, ಅವರ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.

ರವೀಂದ್ರ ಮಹಾಜನಿ ಅವರು ಮೃತಪಟ್ಟ ಖ್ಯಾತ ನಟ. ಅವರು 1949 ರಲ್ಲಿ ಬೆಳಗಾವಿಯಲ್ಲಿ ಜನಿಸಿದ್ದರು. ಅವರ ತಂದೆ ಹೆಚ್.ಆರ್ ಮಹಾಜನಿ ಪ್ರಸಿದ್ಧ ಪತ್ರಕರ್ತರಾಗಿದ್ದರು. 60 ರ ದಶಕದಲ್ಲಿ ಈ ಕುಟುಂಬ ಬೆಳಗಾವಿಯಿಂದ ಮುಂಬೈಗೆ ವಲಸೆ ಹೋಗಿತ್ತು.

ಮರಾಠಿ ಸಿನಿಮಾರಂಗದಲ್ಲಿ ಬೇಡಿಕೆಯ ನಟನಾಗಿ ಗುರುತಿಸಿಕೊಂಡಿರುವ ಗಶ್ಮೀರ್ ಮಹಾಜನಿ, ರವೀಂದ್ರ ಮಹಾಜನಿ ಅವರ ಪುತ್ರರಾಗಿದ್ದಾರೆ.

 

70 ಹಾಗೂ 80ರ ದಶಕದಲ್ಲಿ ರವೀಂದ್ರ ಮಹಾಜನಿ ಅವರು ಹಲವಾರು ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದರು. ಇವುಗಳಲ್ಲಿ ಮುಂಬೈ ಚಾ ಫೌಜ್ದಾರ್, ಜುಂಜ್ ಮತ್ತು ಕಲತ್ ನಕಲತ್ ಸಿನಿಮಾಗಳು ಖ್ಯಾತಿ ಪಡೆದಿದ್ದವು

ತಮ್ಮ ಬಾಡಿಗೆ ಫ್ಲಾಟ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಅವರು ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರವೀಂದ್ರ ಮಹಾಜನಿ ಅವರು ತಮ್ಮ ಫ್ಲಾಟ್‌ನಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಈ ಫ್ಲಾಟ್‌ನಲ್ಲಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಬಾಗಿಲು ಒಡೆದು ನೋಡಿದಾಗ ರವೀಂದ್ರ ಮಹಾಜನಿ ಮೃತಪಟ್ಟಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ನಟನ ಮಗ ಹಲವು ದಿನಗಳಿಂದ ತಂದೆಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಅವರ ಕಾಲ್​ಗೆ ಉತ್ತರ ಬಂದಿರಲಿಲ್ಲ. ನಟನ ಮೃತದೇಹ ಸಿಗುವ ಕೆಲವು ಗಂಟೆಗಳ ಮೊದಲು ಅವರ ಮಗ ತನ್ನ ಸ್ನೇಹಿತನ ಬಳಿ ತಂದೆಯ ಫ್ಲ್ಯಾಟ್​ಗೆ ಹೋಗಿ ನೋಡುವಂತೆ ಹೇಳಿದ್ದರು. ಶನಿವಾರ ತಂದೆಯ ಫ್ಲ್ಯಾಟ್​ಗೆ ಹೋಗಲು ನನ್ನ ಗೆಳೆಯ ತೀರ್ಮಾನಿಸಿದ್ದ ಎಂದು ನಟನ ಪುತ್ರ ತಿಳಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ