LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SSVPಯಲ್ಲಿ ಅದ್ದೂರಿಯಾಗಿ ನಡೆದ ಶಾಲಾ ವಾರ್ಷಿಕೋತ್ಸವ

ಬೆಂಗಳೂರು: ಮೈಸೂರು ರಸ್ತೆಯ ಬ್ಯಾಟರಾಯನ ಪುರದಲ್ಲಿರುವ ಶ್ರೀ ಶಾರದಾ ವಿದ್ಯಾಪೀಠ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವೇದಿಕೆ ಮೇಲೆ ನೃತ್ಯಕ್ಕೆ ಮಕ್ಕಳು ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ಮಾಡಿದ ಬಿಡಿಎ ಮಾಜಿ ಉಪ ನಿರ್ದೇಶಕರಾದ ಆರ್ ವಿ ಕಾಂತರಾಜ್ ನೆರವೇರಿಸಿದರು. ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಬಿವಿ ಪಾಟೀಲ್ ಪಾಂಡು, ಅಧ್ಯಕ್ಷರಾದ ಎನ್ ಕಾಮರಾಜ್ , ಶಾಲೆಯ ಮುಖ್ಯೋಪಾಧ್ಯಾಯರಾದ ಪಿ ಪೂಂಗುಜಲಿ ಉಪಸ್ಥಿತರಿದ್ದರು.

ಶಾಲೆಯ ಆಡಳಿತಾಧಿಕಾರಿಯಾರದ ಕೆ ರಾಮಕೃಷ್ಣಯ್ಯ ಮಾತನಾಡಿ, ಸುಮಾರು 55 ವರ್ಷಗಳಿಂದ ಶಾಲೆಯನ್ನು ನಡೆಸಿಕೊಂಡು ಬರಲಾಗುತ್ತಿದೆ, ನರ್ಸರಿಯಿಂದ ಡಿಗ್ರೀ ವರೆಗೆ ಮಕ್ಕಳಿಗೆ ಅದರಲ್ಲೂ ಆರ್ಥಿಕವಾಗಿ ಹಿಂದುಳಿದ, ಬಡವರಿಗೆ ಯಾವುದೇ ಶುಲ್ಕ ತೆಗೆದುಕೊಳ್ಳದೆ ಶಿಕ್ಷಣವನ್ನು ನೀಡಲಾಗುತ್ತದೆ.

ಬ್ಯಾಟರಾಯನಪುರದಲ್ಲಿ ಬಹುತೇಕವಾಗಿ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಮಕ್ಕಳಿಗೆ ಶಿಕ್ಷಣ ನೀಡುವ ಸಲುವಾಗಿ ಯಾವುದೇ ಆದಾಯವನ್ನು ಬಯಸದೆ ಗುಣಮಟ್ಟದ ವಿಧ್ಯಾಭ್ಯಾಸ ನೀಡಲಾಗುತ್ತದೆ. ದುರಭ್ಯಾದಕ್ಕೆ ಒಳಗಾಗಿರುವ, ಸಮಾಜದಲ್ಲಿ ಕಟ್ಟಕಡೆಯ ಮಕ್ಕಳು ಈ ಶಾಲೆಗೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಾರೆ, 50 ವರ್ಷಗಳ ಹಿಂದೆ 30 ಜನರಿದ್ದ ಮಕ್ಕಳು ಇದೀಗ 1200 ಜನ ಮಕ್ಕಳು ಓದುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಪ್ರಾಥಮಿಕ, ಪ್ರೌಢ,puc, ಕಾಲೇಜು ಸರ್ಕಾರದ ಅನುದಾನದಲ್ಲಿ ನಡೆಯುತ್ತಿದೆ. ಇಂಗ್ಲಿಷ್ ಮಾಧ್ಯಮ ಶಾಲೆ ಅನುದಾನ ರಹಿತವಾಗಿ ನಡೆಯುತ್ತಿದೆ ಎಂದು ಶಾಲಾ ಕಾಲೇಜು ನಡೆದುಬಂದ ಹಾದಿಯನ್ನು ತಿಳಿಸಿದರು.

ಇನ್ನು ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಂಡಿದ್ದರಿಂದ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಲಾಯಿತು. ವೇದಿಕೆಯಲ್ಲಿ ಪುಟಾಣಿ ಮಕ್ಕಳು ಹೆಜ್ಜೆ ಹಾಕಿ ನೆರೆದಿದ್ದವರನ್ನು ಪುಳಕಿತರನ್ನಗಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು