LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯಂಗಳದಲ್ಲಿ ಕಟ್ಟಿಹಾಕಿದ್ದ ನಾಯಿ ಮೇಲೆ ಚಿರತೆ ದಾಳಿ

ಶಿವಮೊಗ್ಗ, ಡಿ.29 : ಹೊಸನಗರ ತಾಲೂಕಿನ ಹಾರೋಹಿತ್ತಲು ಸಮೀಪದ ಕಂಬತ್ಮನೆ ಗ್ರಾಮದ ನಿವಾಸಿ ವಾಸುದೇವ ಎಂಬುವವರ ಮನೆಯ ಅಂಗಳದಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ರಾತ್ರಿ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿದೆ ನಡೆಸಿದೆ.

ಘಟನೆಯ ಸಮಯದ ರಾತ್ರಿಯಾಗಿದ್ದ ಕಾರಣ ಆ ವೇಳೆ ವಿಷಯ ಮನೆಯವರ ಗಮನಕ್ಕೆ ಬಂದಿರಲಿಲ್ಲಿ. ಆದರೆ, ಮುಂಜಾನೆ ನಾಯಿಯ ಮೈಮೇಲೆ ಗಂಭೀರ ಗಾಯಗಳಾಗಿರುವುದನ್ನು ಕಂಡು ಅನುಮಾನಗೊಂಡ ಮಾಲೀಕರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವಿಷಯ ತಿಳಿದಿದೆ.

ಈ ಘಟನೆಯಿಂದಾಗಿ ಹಾರೋಹಿತ್ತಲು, ಕೊಳವಂಕ ಹಾಗೂ ಕಂಬತ್ಮನೆ ಸುತ್ತಮುತ್ತಲಿನ ಹಳ್ಳಿಗಳ ಜನರಲ್ಲಿ ತೀವ್ರ ಆತಂಕ ಮನೆಮಾಡಿದೆ. ಈ ಹಿನ್ನೆಲೆ ಯಾವುದೇ ಜೀವಹಾನಿ ಸಂಭವಿಸುವ ಮುನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಳ್ಳಬೇಕು ಹಾಗೂ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬೋನಿನಲ್ಲಿ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST