LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವಜನತೆಯ ಉದ್ಯೋಗಕ್ಕಾಗಿ ಹೊಸ ಕಾರ್ಯಯೋಜನೆ: ಚಂದ್ರಭೂಪಾಲ





ಶಿವಮೊಗ್ಗ, ಜೂ.16: ಯುವನಿಧಿ ಯೋಜನೆಯ ಫಲಾನುಭವಿ ಯುವಕ-ಯುವತಿಯರಿಗೆ ಭವಿಷ್ಯದಲ್ಲಿ ಅವರ ಸಾಮರ್ಥ್ಯಕ್ಕೆ ಅನುಸಾರವಾಗಿ ಯೋಗ್ಯ ಉದ್ಯೋಗವನ್ನು ಪಡೆಯಲು ಹಾಗೂ ಅವರನ್ನು ಸಮರ್ಥರನ್ನಾಗಿಸಲು ಮುಂದಿನ ದಿನಗಳಲ್ಲಿ ಪ್ರಾಧಿಕಾರದಿಂದ ಹೊಸ ಕಾರ್ಯ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.

ಸೋಮವಾರ ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷರತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ದಿ ನಿಗಮ, ಕೌಶಲ್ಯಾಭಿವೃದ್ದಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಮಾರ್ಗಸೂಚಿಯೊಂದಿಗೆ ಯುವನಿಧಿ ಫಲಾನುಭವಿಗಳನ್ನು ಉದ್ಯೋಗಸ್ಥರನ್ನಾಗಿ ಮಾಡಿ ಅವರ ಭವಿಷ್ಯವನ್ನು ರೂಪಿಸಲಾಗುವುದು.

ಈ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಜಿಲ್ಲೆಯಲ್ಲಿನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಹಾಗೂ ಅವರ ಮುಂದಿನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಕಾರ್ಯಕ್ರಮವನ್ನು ರೂಪಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಪದವೀಧರರು ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳು ಸೇರಿದಂತೆ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 6570 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳ ಇಚ್ಛಾಶಕ್ತಿ ಹಾಗೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ಅಭಿವೃದ್ದಿ ಕ್ಷೇತ್ರದ ಸಹಯೋಗದೊಂದಿಗೆ ವಿವಿಧ ರೀತಿಯ ತರಬೇತಿಯನ್ನು ನೀಡಲಾಗುತ್ತದೆ. ಆ ಮೂಲಕ ಅವರ ಭವಿಷ್ಯವನ್ನು ರೂಪಿಸುವ ದಿಟ್ಟ ಕಾರ್ಯಕ್ಕೆ ಮುಂದಾಗಿದ್ದು, ಈ ಯೋಜನೆ ಪೂರ್ವ ಕಲಿಕೆಯ ಆಧಾರದ ಮೇಲೆ ಶಿಕ್ಷಣ ಮುಗಿಸಿ ಹೊರಬಂದಿರುವ ಫಲಾನುಭವಿಗಳನ್ನು ಉದ್ಯೋಗಸ್ಥರನ್ನಾಗಿಸಲು ನೆರವಾಗಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳು, ಜಿ.ಪಂ. ಸಿಇಓ ಎನ್. ಹೇಮಂತ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು