LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ಮುಂದೆ ಮಲ್ಟಿಪ್ಲೆಕ್ಸ್-ಚಿತ್ರಮಂದಿರಕ್ಕೆ ಏಕ ರೂಪದ ದರ ನೀತಿ?

ಬೆಂಗಳೂರು : ಸಿಂಗಲ್​ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್ ಟಿಕೆಟ್​ ದರದಲ್ಲಿ ಭಾರೀ ವ್ಯತ್ಯಾಸ ಇದೆ. ಅದರಲ್ಲೂ ಪರಭಾಷೆಯ ಸಿನಿಮಾಗಳು ಬಂದರೆ ಮಲ್ಟಿಪ್ಲೆಕ್ಸ್​ಗಳು ಜನರಿಂದ ದೊಡ್ಡ ಮೊತ್ತದ ಹಣವನ್ನು ಲೂಟಿ ಮಾಡುತ್ತಾರೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುವ ಸೂಚನೆ ಕೊಟ್ಟಿದೆ. ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್​ ಸ್ಕ್ರೀನ್ ಥಿಯೇಟರ್​ಗೆ ಒಂದೇ ರೀತಿಯ ದರ ನಿಗದಿ ಮಾಡುವ ಬಗ್ಗೆ ಆಲೋಚನೆ ಮಾಡಿದೆ. ಪರಿಷತ್ ಕಲಾಪದಲ್ಲಿ ಈ ಬಗ್ಗೆ ಚರ್ಚೆ ಆಗಿದ್ದು, ಸರ್ಕಾರದ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.

ಪರಿಷತ್ ಕಲಾಪದಲ್ಲಿ ಎಂಎಲ್​ಸಿ ಗೋವಿಂದ ರಾಜು ಏಕ ರೂಪದ ದರ ವಿಚಾರವನ್ನು ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದರು. ‘ಚಿತ್ರ ಮಂದಿರಗಳಲ್ಲಿ ಒಂದೊಂದು ಸಿನಿಮಾಗೆ ಒಂದೊಂದು ದರ ನಿಗದಿ ಮಾಡಲಾಗುತ್ತಿದೆ. ಕನ್ನಡ ಸಿನಿಮಾಗೆ ಒಂದು ದರ, ಅನ್ಯಭಾಷೆ ಸಿನಿಮಾಗೆ ಇನ್ನೊಂದು ದರ ನಿಗದಿ ಮಾಡಲಾಗುತ್ತಿದೆ. ಕನ್ನಡಕ್ಕೆ ಬಹಳ ಕಡಿಮೆ, ಆದರೆ ಬೇರೆ ಭಾಷೆಯ ಚಿತ್ರಗಳಿಗೆ 500 ರೂಪಾಯಿಯಿಂದ 1000 ರೂಪಾಯಿವರೆಗೆ ವಸೂಲಿ ಮಾಡುತ್ತಾರೆ. ಸರ್ಕಾರದ ಪರಿಮಿತಿಯಲ್ಲೇ ದರ ನಿಯಂತ್ರಣ ಇದ್ದರೂ ನಿಯಂತ್ರಣ ಮಾಡುತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.

2017ರ ಬಜೆಟ್​ನಲ್ಲಿ ಸಿದ್ದರಾಮಯ್ಯ ಅವರು 200 ರೂಪಾಯಿ ದರ ನಿಗದಿ ಮಾಡುತ್ತೇವೆ ಎಂದಿದ್ದರು.  ಅದೂ ಜಾರಿಗೆ ಬಂದಿಲ್ಲ. ಇದಕ್ಕೆ ಗೃಹ ಸಚಿವ ಪರಮೇಶ್ವರ್ ಉತ್ತರಿಸಿದ್ದಾರೆ. ‘ಚಿತ್ರ ಮಂದಿರದಲ್ಲಿ ಮಾಲೀಕರೇ ಟಿಕೆಟ್ ದರ ನಿಗದಿ ಮಾಡುವ ಪದ್ಧತಿ ಇದೆ. ಸಿದ್ದರಾಮಯ್ಯ 2017ರ ಬಜೆಟ್​ನಲ್ಲಿ ಏಕರೂಪ ದರ ಪ್ರಸ್ತಾಪ ಮಾಡಿ ಆದೇಶ ಜಾರಿ ಮಾಡಿದ್ದರು. ನೀವು ಹೇಳಿದಂತೆ 200 ರೂಪಾಯಿ ದರ ನಿಗದಿ ಮಾಡಲಾಗಿತ್ತು. ಆದೇಶ ಮಾಡಿದ ಮೇಲೆ ಥಿಯೇಟರ್ ಮಾಲೀಕರು ಸ್ಟೇ ತಂದಿದ್ದಾರೆ. ಸ್ಟೇ ತಂದ ಮೇಲೆ ಸರ್ಕಾರ ಆ ಆದೇಶವನ್ನು ವಾಪಸ್ ಪಡೆದಿದೆ’ ಎಂದರು ಪರಮೇಶ್ವರ್.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!ಟಾಕ್ಸಿಕ್ ಸಿನಿಮಾದ ಫ್ಲೆಕ್ಸ್ ಅಳವಡಿಕೆ ನಟ ಯಶ್ ವಿರುದ್ಧ FIR.!ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 26ನೇ ವರ್ಷದ ದೀಪೋತ್ಸವದಾವಣಗೆರೆ : ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಸುಬ್ರಹ್ಮಣ್ಯ ಸ್ವಾಮಿಯ ವೀರಗಾಥೆ! ದುಷ್ಟ ತಾರಕಾಸುರನನ್ನು ವೀರ ಶೂರ ಕಾರ್ತಿಕೇಯನು ಸಂಹರಿಸಿದ ಕಥೆ!ಇಂದಿನ ವಚನ: - -ಅಕ್ಕಮಹಾದೇವಿ  ಅವರ ವಚನ..!ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹೆಣ್ಣಿನ ವೇಷ ಧರಿಸಿ ಓಡಾಡುತ್ತಿದ್ದ ಆರೋಪಿ ಬಂಧನ'ಬೀದಿ ನಾಯಿಗಳು ಕಚ್ಚಿದರೆ ಸರ್ಕಾರವೇ ಪರಿಹಾರ ನೀಡಬೇಕು'- ಸುಪ್ರೀಂ ಕೋರ್ಟ್‌ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರು ಮಂದಿ ಉಪನ್ಯಾಸಕರು ಕರ್ತವ್ಯದಿಂದ ವಜಾಪದ ಬಳಕೆ ವಿವಾದ - ಬಿಗ್‌ಬಾಸ್‌ ಶೋ, ನಟ ಸುದೀಪ್ ವಿರುದ್ಧ ದೂರು ದಾಖಲು