Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಹಿಳೆಯರಲ್ಲಿ ನಾಯಕತ್ವ ಬೆಳೆಸುವ ತರಬೇತಿ ಕಾರ್ಯಗಾರ 

 

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ ,ಜೂನ್23 : ದೆಹಲಿಯ ಇಂಡಿಯನ್ ಸ್ಕೂಲ್ ಆಫ್ ಡೆಮಾಕ್ರಸಿ ಎಂಬ ಸಂಸ್ಥೆ ದೇಶದ ವಿವಿಧ ರಾಜ್ಯಗಳಿಂದ 54 ಮಹಿಳಾ ಚುನಾಯಿತ ಪ್ರತಿನಿಧಿಗಳಿಗೆ ನಾಯಕತ್ವದ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು.

ಗ್ರಾಮ ಪಂಚಾಯಿತಿ ಸದಸ್ಯರು,ಸಂಸದರು,ಶಾಸಕರು ಹಾಗೂ ನಗರಸಭಾ ಸದಸ್ಯರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಹಿಳಾ ಪ್ರತಿನಿಧಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಭಾರತದ ರಾಜಕೀಯವನ್ನು ರೂಪಿಸುವ ಹಾದಿ, ಧೈರ್ಯ ಮತ್ತು ಸ್ಪೂರ್ತಿ ತುಂಬುವ ನಾಯಕತ್ವದ ಗುಣವನ್ನು ಮಹಿಳೆಯರಲ್ಲಿ ಬೆಳೆಸುವ ಸಲುವಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ದೇಶದ ವಿವಿಧ ರಾಜ್ಯಗಳಿಂದ ಅನೇಕ ಮಹಿಳಾ ಪ್ರತಿನಿಧಿಗಳೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಖಜಾಂಚಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಶಿಡ್ಲಘಟ್ಟ ತಾಲೂಕಿನ ಜೆ.ವೆಂಕಟಾಪುರ ಗ್ರಾಪಂ ಉಪಾಧ್ಯಕ್ಷೆ ಶಶಿಕಲಾ ಅವರು ಪ್ರತಿನಿಧಿಸಿದರು.

ಗ್ರಾಪಂಯಲ್ಲಿ ಮಹಿಳಾ ಸದಸ್ಯರಿಗೆ ಇರುವ ಹಕ್ಕುಗಳು ಮತ್ತು ಸ್ಥಳೀಯ ಮಟ್ಟದಲ್ಲಿ ಯಾವ ರೀತಿ ಸಂಪನ್ಮೂಲಗಳನ್ನು ಕ್ರೂಢೀಕರಿಸಬೇಕು, ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ತೆರಿಗೆ ಸಂಗ್ರಹ ಹಾಗೂ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತವನ್ನು ಜಾರಿಗೊಳಿಸುವ ವಿಚಾರಗಳ ಬಗ್ಗೆ ಮಹಿಳಾ ಪ್ರತಿನಿಧಿಗಳಿಗೆ ಸೂಕ್ತ ರೀತಿಯ ಮಾಹಿತಿ ಮತ್ತು ಉಪನ್ಯಾಸವನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನೀಡಲಾಯಿತು.

ಮಹಿಳೆಯರನ್ನು ತುಳಿಯುವ ಮನಸ್ಥಿತಿ ಇರುವ ಸಮಾಜದಲ್ಲಿ ನೊಂದವರೇ ಜಾಸ್ತಿ ಆ ನೊಂದ ಮಹಿಳೆಯರಿಗೆ ಆತ್ಮವಿಶ್ವಾಸವನ್ನು ತುಂಬಿ ಹೊಸ ಚೈತನ್ಯವನ್ನು ನೀಡುವುದರ ಜೊತೆಗೆ ,ಗ್ರಾಮ ಪಂಚಾಯತಿಗಳ ಸಬಲೀಕರಣ ಮುಂದಿನ ದಿನಗಳಲ್ಲಿ ನಮ್ಮ ಸುತ್ತ ಮುತ್ತಲಿನ ಸಮಾಜಕ್ಕಾಗಿ ಮತ್ತು ಶಿಕ್ಷಣಕ್ಕಾಗಿ ಉತ್ತಮ ಸಂದೇಶ ನೀಡುವ ಜೊತೆಗೆ ನಮ್ಮ ಕೈಲಾದಷ್ಟು ಸಹಾಯ ಸಹಕಾರ ಉತ್ತಮವಾದಂತಹ ಬೆಳವಣಿಗೆಯನ್ನು ಮಾಡಲು ಸಾಧ್ಯವೆಂದು ಸಂಸ್ಥೆಯವರು ಅರ್ಥಪೂರ್ಣವಾಗಿ ಮನವರಿಕೆ ಮಾಡಿ ಕೊಟ್ಟಿದ್ದು ನಿಜಕ್ಕೂ ಅಭಿನಂದನೀಯ ಎಂದರಲ್ಲದೆ ಇದೇ ಮಾದರಿಯ ತರಬೇತಿ ಕಾರ್ಯಗಾರವನ್ನು ಕರ್ನಾಟಕದಲ್ಲಿ ಮಾಡಲು ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸಹ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇನೆ ಎಂದು ಶಶಿಕಲಾ ಅವರು ತಮ್ಮ ಅನುಭವವನ್ನು ಹಂಚಿಕೊಂಡರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ