Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

​ಹರಿಯಬ್ಬೆಯಲ್ಲಿ ಗಾಂಧೀಜಿ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು: ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ, ಹರಿಯಬ್ಬೆಯ ದಾವಣಗೆರೆ ವಿವಿ ಘಟಕ ಕಾಲೇಜಿನಲ್ಲಿ 'ಗಾಂಧೀಜಿ ಅವರ ಬಹುಶಿಸ್ತೀಯ ನೋಟಗಳು' ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ 'ಸತ್ಯಶೋಧನೆ-೧೦೦' ಪುಸ್ತಕ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ವಿವರ:
ಈ ವಿಶೇಷ ವಿಚಾರ ಸಂಕಿರಣವು ದಿನಾಂಕ ಮೇ ೦೯ ಮತ್ತು ೧೦, ೨೦೨೬ ರಂದು (ಶನಿವಾರ ಮತ್ತು ಭಾನುವಾರ) ನಡೆಯಲಿದೆ.
​ಉದ್ಘಾಟನಾ ಸಮಾರಂಭ (ಮೇ ೦೯):
​ಶನಿವಾರ ಬೆಳಿಗ್ಗೆ ೧೦:೦೦ ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ವಿವಿ ಕುಲಪತಿಗಳಾದ ಪ್ರೊ. ಬಿ. ಡಿ. ಕುಂಬಾರ ಅವರು ವಹಿಸಲಿದ್ದಾರೆ.

ಬೆಂಗಳೂರು ವಿವಿ ಪ್ರಾಧ್ಯಾಪಕ ಹಾಗೂ ಗಾಂಧಿ ಸ್ಮಾರಕ ನಿಧಿಯ ಸದಸ್ಯರಾದ ಪ್ರೊ. ಡಿ. ಕೆ. ಚಿತ್ರಯ್ಯ ಪೂಜಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳು:
ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ. ಶ್ರೀನಿವಾಸ್, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ದಾವಣಗೆರೆ ವಿವಿ ಕುಲಸಚಿವ ಎಸ್.ಬಿ. ಗಂಟಿ, ಮತ್ತು ಸಿಂಡಿಕೇಟ್ ಸದಸ್ಯರಾದ ಶಾರದ ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ವಿಚಾರ ಗೋಷ್ಠಿಗಳು:
​ಎರಡು ದಿನಗಳ ಕಾಲ ನಡೆಯುವ ಈ ಸಂಕಿರಣದಲ್ಲಿ ಗಾಂಧೀಜಿಯವರ ಜೀವನ ಮತ್ತು ಸಂದೇಶಗಳ ಕುರಿತು ಒಟ್ಟು ನಾಲ್ಕು ಪ್ರಮುಖ ಗೋಷ್ಠಿಗಳು ನಡೆಯಲಿವೆ:
​ಗೋಷ್ಠಿ-೧: 'ಮಹಾತ್ಮ ಗಾಂಧಿಯವರ ಆತ್ಮಚರಿತ್ರೆ ನನ್ನ ಸತ್ಯಾನ್ವೇಷಣೆ ಒಂದು ಅವಲೋಕನ' ಮತ್ತು 'ಗಾಂಧಿ ಚಿಂತನೆಗಳ ಪ್ರಸ್ತುತತೆ'.
​ಗೋಷ್ಠಿ-೨: 'ಗಾಂಧಿ ಪ್ರೇರಿತ ವಿಶ್ವಮಾನ್ಯರು' ಮತ್ತು 'ಕನ್ನಡ ಕವಯಿತ್ರಿಯರು ಕಂಡಂತೆ ಗಾಂಧಿ'.
​ಗೋಷ್ಠಿ-೩: 'ಗಾಂಧಿ ತತ್ವಗಳು' ಮತ್ತು 'ನವೋದಯ ಮತ್ತು ಪ್ರಗತಿಶೀಲ ಸಾಹಿತ್ಯದ ಮೇಲೆ ಗಾಂಧೀಜಿಯವರ ಪ್ರಭಾವ'.
​ಗೋಷ್ಠಿ-೪: 'ಕನ್ನಡ ಕಾವ್ಯಗಳಲ್ಲಿ ಗಾಂಧಿ ದರ್ಶನ' ಮತ್ತು 'ಕನ್ನಡ ಕಾವ್ಯ ಕಂಡ ಗಾಂಧಿ'.

ಈ ಗೋಷ್ಠಿಗಳಲ್ಲಿ ನಾಡಿನ ಖ್ಯಾತ ಸಾಹಿತಿಗಳು ಹಾಗೂ ವಿವಿಧ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸಮಾರೋಪ ಸಮಾರಂಭ (ಮೇ ೧೦):
​ಭಾನುವಾರ ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ಜೆ. ರಾಜು ಬೇತೂರು ಪಾಳ್ಯ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಘಟಕ ಕಾಲೇಜಿನ ಸಂಯೋಜನಾಧಿಕಾರಿಗಳಾದ ಡಾ. ಶಾಂತರಾಜು ಹೆಚ್. ವಿ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಹರಿಯಬ್ಬೆ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಾಂಧಿ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
​ಸ್ಥಳ: ದಾವಣಗೆರೆ ವಿಶ್ವವಿದ್ಯಾನಿಲಯ ಘಟಕ ಕಾಲೇಜು ಆವರಣ, ಹರಿಯಬ್ಬೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ