LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೆಲ್ಲಾರ ಜಂಕ್ಷನ್ ಕಾಮಗಾರಿ ಶೀಘ್ರ ಆರಂಭಿಸಲು ಆಮ್ ಆದ್ಮಿ ಪಕ್ಷದ ಒತ್ತಾಯ

ಬೆಂಗಳೂರು: ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವೆಲ್ಲಾರ ಜಂಕ್ಷನ್ ಹಾಗೂ ವೈಟ್ ಫೀಲ್ಡ್ ವರೆಗಿನ ಸಿಗ್ನಲ್ ಫ್ರೀ ಕಾರಿಡಾರ್ ಕಾಮಗಾರಿ ಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರುಗಳು ಇಂದು ಸ್ಥಳದಲ್ಲಿ ಪ್ರತಿಭಟನೆ ಮಾಡುವ ಮೂಲಕ ಸರ್ಕಾರವನ್ನು ಒತ್ತಾಯ ಪಡಿಸಿದರು.

ನಗರದ ಹಳೆ ಏರ್ ಪೋರ್ಟ್ ರಸ್ತೆಯ ಮಣಿಪಾಲ ಆಸ್ಪತ್ರೆಯ ಜಂಕ್ಷನ್ ಬಳಿ ಸೇರಿದ್ದ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಜಗದೀಶ್ ಬಾಬು ಮಾಧ್ಯಮಗಳೊಂದಿಗೆ ಮಾತನಾಡುತ್ತಾ , ಕಳೆದ 15 ವರ್ಷಗಳ ಹಿಂದೆಯೇ ಈ ಕಾಮಗಾರಿಗೆ ಚಾಲನೆ ಸಿಕ್ಕಿತ್ತು. ಆದರೆ ಸರ್ಕಾರವು ಈ ರಸ್ತೆಯಲ್ಲಿ ದೇಶದ ಪ್ರಧಾನ ಮಂತ್ರಿಗಳು, ಪ್ರಮುಖ ಮಂತ್ರಿಗಳು ಸೇರಿದಂತೆ ಅನೇಕ ಪ್ರತಿಷ್ಠಿತ ರಾಜಕಾರಣಿಗಳು ಓಡಾಡುತ್ತಾರೆ ಎಂಬ ಕಾರಣ ನೀಡಿ ಈ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ. ಸರ್ಕಾರಕ್ಕೆ ಪ್ರಭಾವಿ ರಾಜಕಾರಣಿಗಳ ಹಿತಾಸಕ್ತಿಯೇ ಮುಖ್ಯವಾಗಿದೆಯೇ ಹೊರತು , ಪ್ರತಿನಿತ್ಯ ಸಂಚಾರ ಸಮಸ್ಯೆಯಿಂದ ಯಾತನೆ ಅನುಭವಿಸುತ್ತಿರುವ ಲಕ್ಷಾಂತರ ಪ್ರಯಾಣಿಕರ ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯೇ ಇಲ್ಲದಾಗಿದೆ.

ಈ ಭಾಗದಲ್ಲಿ ಎಚ್ಎಎಲ್,ಎನ್ಎಎಲ್ ಹಾಗೂ ಡಿ ಆರ್ ಡಿ ಓ ದಂತಹ ರಕ್ಷಣಾ ಸಂಸ್ಥೆಗಳ ಸ್ಥಾಪನೆಯಿಂದ ಬೆಂಗಳೂರಿಗೆ ಬ್ರಾಂಡ್ ತಂದಿರುವ ಹಿರಿಮೆ ಈ ರಸ್ತೆಗೆ ಇದೆ. ಸದಾ ಬ್ರಾಂಡ್ ಬೆಂಗಳೂರೆಂದು ಮಾತನಾಡುವ ಉಪ ಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಈ ಕಡೆ ಗಮನಹರಿಸಿ ಕೂಡಲೇ ಈ ಭಾಗದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು. ಪಕ್ಷದ ಮುಖಂಡರುಗಳಾದ ಅನಿಲ್ ನಾಚಪ್ಪ, ಲೋಕೇಶ್ ಕುಮಾರ್, ಭಾನುಪ್ರಿಯ ಸೇರಿದಂತೆ ಅನೇಕ ಕಾರ್ಯಕರ್ತರುಗಳು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್