
ಬೃಹತ್ ಪ್ರತಿಭಟನಾ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಪ್ರತಿಭಟನಾನಿರತರಿಗೆ ತಮ್ಮ ಪಕ್ಷದ ಬೆಂಬಲವಿರುವುದಾಗಿ ಘೋಷಿಸಿದರು. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ದೇವದಾಸಿ ಮಹಿಳೆಯರು ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಜಂಟಿಯಾಗಿ ಡಿಸೆಂಬರ್ 28, 29 ಮತ್ತು 30ರಂದು ಬೃಹತ್ ಪ್ರತಿಭಟನಾ ಧರಣಿ- ಸತ್ಯಾಗ್ರಹವನ್ನು ಹಮ್ಮಿಕೊಂಡಿವೆ.