Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಹಂಸಲೇಖ ಸಾಧನೆಗೆ ಶೈಕ್ಷಣಿಕ ಗೌರವ: ಈಶ್ವರ್ ಗೆ ಪಿಎಚ್.ಡಿ ಪದವಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ನಿವಾಸಿ
, ಹಾಲಿ ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಸಂಶೋಧನಾರ್ಥಿ ಈಶ್ವರ್ ರವರಿಗೆ ಪಿಎಚ್.ಡಿ ಪದವಿ ಘೋಷಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರಸ್ತುತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿ ಪ್ರೊ. ಬಿ.ಕೆ. ರವಿ ಅವರ ಮಾರ್ಗದರ್ಶನದಲ್ಲಿ ವಿವಿಗೆ ಮಂಡಿಸಿದ ಕನ್ನಡ ಚಿತ್ರರಂಗಕ್ಕೆ ಹಂಸಲೇಖ ರವರ ಕೊಡುಗೆ: ಒಂದು ಅಧ್ಯಯನಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಘೋಷಿಸಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಿಸಿದೆ. ಮಾತ್ರವಲ್ಲ (ಮೌಲ್ಯಮಾಪನ) ವಿಭಾಗದ ಕುಲ‌ಸಚಿವ ಪ್ರೊ. ಚಂದ್ರಶೇಖರ ಎಸ್. ಕರಿಗಾರ ಅವರು ಡಾಕ್ಟರೇಟ್ ಘೋಷಣೆಯ ಅಧಿಸೂಚನೆ ಪತ್ರವನ್ನು ಡಾ. ಈಶ್ವರ್ ರವರಿಗೆ ನೀಡಿ ಅಭಿನಂದಿಸಿದರು.

ಈ ಹಿನ್ನೆಲೆಯಲ್ಲಿ ಡಾ. ಈಶ್ವರ್ ಅವರು ಸಿರಿಗೇರಿ ಗ್ರಾಮದ ದಿವಂಗತ ಛಲವಾದಿ ತಿಪ್ಪಣ್ಣ, ಛಲವಾದಿ ಹುಲಿಗೇಮ್ಮ ದಂಪತಿಯ ಹಿರಿಯ ಪುತ್ರ. ಕೊರೋನಾ ಸಂದರ್ಭದಲ್ಲಿ ಕೆಲವೇ ತಿಂಗಳುಗಳ‌ಅವಧಿಯಲ್ಲಿ ಅಪ್ಪ ಅಮ್ಮ ಸಾವನ್ನಪ್ಪಿದರೂ ಧೃತಿಗೆಡದೆ ಅದ್ಯಯನ ಮುಂದುವರೆಸಿ ಡಾಕ್ಟರೇಟ್ ಪದವಿ ಪಡೆದಿರುವುದು ವಿಶೇಷ. ಈ ಮೂಲಕ ಸಂಶೋಧನೆ ಮಾಡುವ ಯುವಕರಿಗೆ ಪ್ರೇರಣೆಯಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯಕ್ಕೆ 5ನೇ ರ್ಯಾಂಕ್ ನೊಂದಿಗೆ ಉತ್ತೀರ್ಣರಾಗಿದ್ದಾರೆ. ಬಳಿಕ ಇದೇ ವಿಭಾಗದಲ್ಲಿ ಸಂಶೋಧನೆ ಮುಂದುವರೆಸಿದರು. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಪ್ರತಿಷ್ಠಿತ ದಿನಪತ್ರಿಕೆಗಳಲ್ಲಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿ ವೃತ್ತಿಪರ ಅನುಭವ ಹೊಂದಿದ್ದಾರೆ.

ಅಭಿನಂದನೆ: ಡಾ. ಈಶ್ವರ್ ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಹಾಗೂ ಸಿರಿಗೇರಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಶುಭ ಕೋರಿದ್ದಾರೆ.

ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ಮಂಡ್ಯ ಅನನ್ಯ ಮಾಧ್ಯಮ ತರಬೇತಿ ಕೇಂದ್ರದ ಮುಖ್ಯಸ್ಥ ರಾಜೇಶ್ ರಾಂಪುರ ಡಾ. ಈಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಶೋಧನಾ ಮಹಾಪ್ರಬಂಧವು ಕನ್ನಡ ಚಿತ್ರರಂಗದಲ್ಲಿ ಇದೊಂದು ಹೊಸ ಮೈಲುಗಲ್ಲು ಮತ್ತು ವಿಶಿಷ್ಟ ದಾಖಲೆಯಾಗಿದೆ. ಸಿನಿಮಾ ರಂಗದ ಹಲವಾರು ಪರಿಣಿತರು, ಸಿನಿಮಾ ಪತ್ರಕರ್ತರು, ಸಿನಿಮಾ ಕಲಾವಿದರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಸೇರಿದಂತೆ ಕನ್ನಡ ಸಿನಿಮಾದ ವಿವಿಧ ಸಂಘಗಳು, ಹಂಸಲೇಖ ರವರು ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಸಮಗ್ರವಾಗಿ ಸಂಶೋಧನೆ ನಡೆಸಿರುವ ಮಹಾಪ್ರಬಂಧದ ಕುರಿತು ಹರ್ಷ ವ್ಯಕ್ತಪಡಿಸಿ ಪ್ರಶಂಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ