LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕ್ರೀಡೆಯಲ್ಲಿ ಗೆದ್ದರೂ ಸೋತರೂ ಸಮಾನವಾಗಿ ಸ್ವೀಕರಿಸಿ: ಹೆಚ್.ಹನುಮಂತಪ್ಪ

 

ಚಿತ್ರದುರ್ಗ : ಯಾವುದೇ ಕ್ರೀಡೆಯಾಗಲಿ ಸೋತವರು, ಗೆದ್ದವರು ಎನ್ನುವ ತಾರತಮ್ಯವಿಲ್ಲದೆ ಸಮಾನವಾಗಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕೆಂದು ಸರಸ್ವತಿ ವಿದ್ಯಾಸಂಸ್ಥೆ ಅಧ್ಯಕ್ಷರಾದ ಹೆಚ್.ಹನುಮಂತಪ್ಪ ಹೇಳಿದರು.

ಸರಸ್ವತಿ ಕಾನೂನು ಮಹಾ ವಿದ್ಯಾಲಯ ಚಿತ್ರದುರ್ಗ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಅಂತರ್ ಮಹಾ ವಿದ್ಯಾಲಯಗಳ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕಾನೂನು ವಿಶ್ವವಿದ್ಯಾಲಯ ಪ್ರತಿ ವರ್ಷವೂ ಕಬ್ಬಡಿ ಆಟಕ್ಕೆ ಪ್ರೋತ್ಸಾಹ ನೀಡುತ್ತ ಬರುತ್ತಿದೆ. ಪಾಠಗಳ ಜೊತೆ ಗ್ರಾಮೀಣ ಕ್ರೀಡೆಗಳ ಕಡೆಗೂ ಗಮನ ಕೊಡಬೇಕು. ಕ್ರೀಡೆಯಲ್ಲಿ ಗೆದ್ದು ಬಹುಮಾನ ಪಡೆಯುವುದು ಮುಖ್ಯವಲ್ಲ. ಸೋತವರು ಮುಂದೆ ಗೆಲ್ಲುವಂತೆ ಬೆನ್ನು ತಟ್ಟಬೇಕೆಂದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಖಾಲಿದ್ಖಾನ್ ಮಾತನಾಡುತ್ತ ಕಬ್ಬಡಿ ಆಟದ ಹಿಂದೆ ತಿಂಗಳುಗಳ ಕಾಲ ಪರಿಶ್ರಮವಿರುತ್ತದೆ. ಚಿತ್ರದುರ್ಗ ಸರಸ್ವತಿ ಕಾನೂನು ಕಾಲೇಜಿನವರು ಕಬ್ಬಡಿ ಪಟುಗಳಿಗೆ ಅಚ್ಚುಕಟ್ಟಾಗಿ ವಸತಿ, ಊಟದ ವ್ಯವಸ್ಥೆ ಕಲ್ಪಿಸಿದ್ದರು. ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ತರಬೇತುದಾರರು, ತೀರ್ಪುಗಾರರು ಹೀಗೆ ಎಲ್ಲರ ಹೊಂದಾಣಿಕೆ ಮುಖ್ಯ ಎಂದು ತಿಳಿಸಿದರು.

ಸರಸ್ವತಿ ಕಾನೂನು ಕಾಲೇಜು ಪ್ರಾಚಾರ್ಯರಾದ ಡಾ.ಎಂ.ಎಸ್.ಸುಧಾದೇವಿ ಮಾತನಾಡಿ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆಯೇ ಮುಖ್ಯವಲ್ಲ. ಎಲ್ಲರ

ಸಮ್ಮಿಲನವಾಗುತ್ತದೆ. ಕಬ್ಬಡಿಯಲ್ಲಿ ಶಕ್ತಿ, ವೇಗ, ತಂತ್ರ, ತಂಡದ ಒಗ್ಗಟ್ಟು ಅಡಗಿರುತ್ತದೆ. ಸೋಲು-ಗೆಲುವು ಕ್ರೀಡೆಯ ಒಂದು ಭಾಗ. ಗೆದ್ದವರಿಗಿಂತ ಸೋತವರಿಗೆ ಪ್ರೋತ್ಸಾಹ ಹೆಚ್ಚು ಸಿಗಬೇಕು. ಕ್ರೀಡಾ ಮನೋಭಾವವೆ ನಿಜವಾದ ಗೆಲುವು. ನಿರಂತರ ಅಭ್ಯಾಸ ಮುಖ್ಯ. ಎಲ್ಲಾ ತಂಡಗಳು ಧೈರ್ಯದಿಂದ ಸೆಣಸಾಡುವುದರ ಜೊತೆ ಶಿಸ್ತು, ಸಂಯಮದಿಂದ ವರ್ತಿಸಿರುವುದು ನಮಗೆಲ್ಲಾ ಖುಷಿ ಕೊಟ್ಟಿದೆ ಎಂದು ಪ್ರಶಂಶಿಸಿದರು.

ಕಬ್ಬಡಿಯಲ್ಲಿ ತೀರ್ಪುಗಾರರು ಮತ್ತು ತರಬೇತುದಾರರ ಪರಿಶ್ರಮವಿರುತ್ತದೆ. ಸೋತವರು ಕುಗ್ಗದೆ ಮುಂದೆ ಗೆಲ್ಲಬೇಕೆಂಬ ಆತ್ಮವಿಶ್ವಾಸ ಬೆಳೆಸಿಕೊಳ್ಳಿ ಎಂದು ಹೇಳಿದರು.

ಸರಸ್ವತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಿ.ಕೆ.ಶೀಲಾ ಮಾತನಾಡಿ ಪ್ರತಿಯೊಂದು ವೃತ್ತಿಯಲ್ಲಿಯೂ ಒತ್ತಡವಿರುತ್ತದೆ. ವ್ಯಾಯಾಮವನ್ನು ಹವ್ಯಾಸವಾಗಿ ಬೆಳೆಸಿಕೊಂಡಾಗ ಮಾನಸಿಕ ಮತ್ತು ದೈಹಿಕವಾಗಿ ಒತ್ತಡದಿಂದ ಹೊರ ಬರಬಹುದು. ವಕೀಲ ವೃತ್ತಿಯಲ್ಲಿರುವವರು ಕಕ್ಷಿದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆಂದರು.

ಸರಸ್ವತಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಫಾತ್ಯರಾಜನ್ ವೇದಿಕೆಯಲ್ಲಿದ್ದರು.

ಸರಸ್ವತಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಶ್ರೀಶೈಲ ಎಲ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪಿ.ಸಿ.ಮುರುಗೇಶ್ ವಂದಿಸಿದರು.

ಸರಸ್ವತಿ ಕಾನೂನು ಮಹಾವಿದ್ಯಾಲಯದ ಪ್ರೊಫೆಸರ್ಗಳಾದ ಎನ್.ಡಿ.ಗೌಡ, ರವಿಕುಮಾರ್, ರಮೇಶ್, ಕರಿಯಣ್ಣ, ಮುರಳಿ, ಸಂದೇಶ್, ಅಭಿನೇತ್ರಿ, ಹರ್ಷ, ಸಾಹಿ ನಿಕಿತ ಇವರುಗಳು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026