ಬೆಳಗಾವಿ :
ಇಲ್ಲಿಯ ಕೊಲ್ಲಾಪುರ ಸರ್ಕಲ್ ಬಳಿಯ ಬಿ.ಬಿ. ಹೊಸಮನಿ & ಸನ್ಸ್ ಅವರ ಪೆಟ್ರೋಲ್ ಬಂಕ್ ಬಳಿ ಕಾರಿನ ಮುಂಭಾಗಕ್ಕೆ ಬೆಂಕಿ ಹೊತ್ತಿಕೊಂಡು ದೊಡ್ಡ ಅನಾಹುತ ತಪ್ಪಿದೆ.
ಮಂಗಳವಾರ ಈ ಘಟನೆ ನಡೆದಿದೆ. ಕಾರಿಗೆ ಇಂಧನ ಹಾಕಿಸಿಕೊಳ್ಳಲು ಆಗಮಿಸಿದಾಗ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ. ಕಾರಿನಲ್ಲಿ ಬೆಂಕಿ ಆವರಿಸಿದ್ದಂತೆ ಅದರಲ್ಲಿದ್ದವರು ತಕ್ಷಣ ಇಳಿದಿದ್ದಾರೆ. ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ. ಘಟನೆಯ ಚಿತ್ರಣ ಪೆಟ್ರೋಲ್ ಬಂಕ್ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.