LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಸೂಕ್ತ ತಳಿ, ಪೋಷಕಾಂಶಗಳ ನಿರ್ವಹಣೆಯಿಂದ ಹೆಚ್ಚಿನ ಇಳುವರಿ, ಗುಣಮಟ್ಟ ಈರುಳ್ಳಿ ಉತ್ಪಾದನೆ



ಚಿತ್ರದುರ್ಗಜುಲೈ04:

ಹೆಚ್ಚಿನ ಇಳುವರಿ ಹಾಗೂ ಗುಣಮಟ್ಟದ ಈರುಳ್ಳಿ ಉತ್ಪಾದನೆ ಪಡೆಯಲು ರೈತರು ಸೂಕ್ತ ತಳಿಯ ಆಯ್ಕೆ, ಮಣ್ಣು ಮಾದರಿ ಆಧಾರಿತ ಪೋಷಕಾಂಶಗಳ ನಿರ್ವಹಣೆ ಹಾಗೂ ಹೆಚ್ಚಿನ ಸಾವಯವ ಗೊಬ್ಬರ ಬಳಸುವುದು ಸೂಕ್ತ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು.

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಗುರುವಾರ ಜಿಲ್ಲೆಯ ರೈತರಿಗೆ “ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯು ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಪ್ರಮುಖ ತರಕಾರಿ ಬೆಳೆಯಾಗಿದ್ದು, ಮುಖ್ಯವಾಗಿ ಚಿತ್ರದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ಹೆಚ್ಚಾಗಿ ಬೆಳೆಯುತ್ತಿದ್ದು ಸದರಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಕೀಟ ಮತ್ತು ರೋಗ ನಿರ್ವಹಣೆ ಕುರಿತ ತಾಂತ್ರಿಕ ಮಾಹಿತಿಯ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ತರಕಾರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರಕಾಶ್ ಕೆರೂರೆ ಮಾತನಾಡಿ, ಈರುಳ್ಳಿ ಬೆಳೆಗೆ ಜೂನ್ ಮತ್ತು ಜುಲೈ ತಿಂಗಳು ಬಿತ್ತನೆಗೆ ಸೂಕ್ತವಾಗಿದ್ದು, ಈರುಳ್ಳಿ ಬೆಳೆಯ ವಿವಿಧ ತಳಿಗಳು, ರಸಗೊಬ್ಬರದ ಪ್ರಮಾಣ, ಬಿತ್ತನೆ ಬೀಜ ಬಳಸುವ ಪ್ರಮಾಣ, ಬೀಜೋಪಚಾರದ ಪ್ರಾಮುಖ್ಯತೆ, ಬೆಳೆಯಲ್ಲಿ ಸಸಿ ಮಡಿ ಮಾಡುವ ವಿಧಾನ, ಕಳೆ ನಿರ್ವಹಣೆ ಮತ್ತು ನೀರು ನಿರ್ವಹಣೆ ಕುರಿತು ಮಹಿತಿ ನೀಡಿದರು.

ತದನಂತರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ತಾಕಿಗೆ ಭೇಟಿ ನೀಡಿ ಈರುಳ್ಳಿ ಬೆಳೆಯ ವಿವಿಧ ತಳಿಗಳ ಪ್ರಯೋಗದ ಪ್ರಾತ್ಯಕ್ಷಿಕೆ ತಾಕಿಗೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಶರಣಪ್ಪ ಜಂಗಂಡಿಯವರು ಹೊಸದಾಗಿ ತಯಾರಿಸಿದ ಈರುಳ್ಳಿಯ ಮೇಲಿನ ಜುಟ್ಟು ಕತ್ತರಿಸುವ ಯಂತ್ರದ ಕುರಿತು ಮಾಹಿತಿ ನೀಡಿದರು.

ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ.ಟಿ.ರುದ್ರಮುನಿ ಅವರು, ಈರುಳ್ಳಿ ಬೆಳೆಯಲ್ಲಿ ಬರುವ ಪ್ರಮುಖ ಕೀಟಗಳಾದ ಥ್ರೀಪ್ಸ್, ನುಸಿ, ತಂಬಾಕಿನ ಹುಳು ಹಾಗೂ ಪ್ರಮುಖ ರೋಗಗಳಾದ ನೇರಳೆ ಮಚ್ಚೆ ರೋಗ, ದುಂಡಾಣು ಗೆಡ್ಡೆಕೊಳೆ ರೋಗಗಳಸಮಗ್ರ ನಿರ್ವಹಣೆ ಕ್ರಮಗಳು ಕುರಿತು ಮಾಹಿತಿ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು