ಅಗ್ನಿವೀರ್ ನೇಮಕಾತಿಗೆ ಅರ್ಜಿ ಹಾಕಬಹುದು.!
ಚಿತ್ರದುರ್ಗ: ಬಾಂಬೆ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್ನ ಕರ್ಕಿ ಹಾಗೂ ಪುಣೆಯಲ್ಲಿ ಯುಎಚ್ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಗ್ನಿವೀರ್ ನೇಮಕಾತಿ ನಡೆಯಲಿದೆ.
ಅಗ್ನಿವೀರ್ನಲ್ಲಿ ವಿವಿಧ ಹುದ್ದೆಗಳಾದ ಜನರಲ್ ಡ್ಯೂಟಿ, ಟೆಕ್ನಿಕಲ್ ಮತ್ತು (ಅಗ್ನಿವೀರ್ ಟ್ರೇಡ್ಸ್ಮನ್ 8 ಮತ್ತು 9ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋಟ್ರ್ಸ್ಮೆನ್ ಒಪೆನ್ ಕ್ಯಾಟಗರಿಗೆ 2025 ಆಗಸ್ಟ್ 04 ರಿಂದ ಸೆಪ್ಟೆಂಬರ್ 04 ರವರೆಗೆ ಜರುಗುವ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ www.bsakirrkee.org ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.