LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದೇಶದ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಬಿಜೆಪಿ ಅಪಾಯಕಾರಿ'- ಅಖಿಲೇಶ್ ಯಾದವ್

ಲಖನೌ : ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬಿಜೆಪಿ ಅಪಾಯಕಾರಿಯಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಲಖನೌದಲ್ಲಿ ಸಮಾಜವಾದಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನದಿಂದ ಜನರಿಗೆ ಮತದಾನದ ಹಕ್ಕು ಸಿಕ್ಕಿದೆ. ಆದರೆ, ಬಿಜೆಪಿ ಅದನ್ನು ಕಸಿದುಕೊಳ್ಳುತ್ತಿದೆ. ಉಪಚುನಾವಣೆಯಲ್ಲಿ ಮತಗಳನ್ನು ಲೂಟಿ ಮಾಡಲಾಗಿದೆ. ಜನರನ್ನು ಮತದಾನ ಮಾಡದಂತೆ ತಡೆಯಲಾಗಿದೆ ಎಂದಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ಬಡವರು, ರೈತರು, ಅವಕಾಶ ವಂಚಿತರಿಗೆ ಶಕ್ತಿ ನೀಡುತ್ತದೆ. ಆದರೆ, ಬಿಜೆಪಿ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಸಂವಿಧಾನವನ್ನು ಜಾರಿಗೆ ತರಲು ಒಳ್ಳೆಯ ಜನರ ಅಗತ್ಯವಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ನಕಲಿ ಸುದ್ದಿಗಳ ಮೂಲವಾಗಿದೆ, ಅದು ಸುಳ್ಳುಗಳನ್ನು ಮಾತ್ರ ಪ್ರಚಾರ ಮಾಡುತ್ತದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತದೆ. ಅದು ಸರ್ವಾಧಿಕಾರದ ಹಾದಿಯಲ್ಲಿದೆ. ಬಿಜೆಪಿ ಎಂದಿಗೂ ದೇಶದ ಬಡ ಜನರು ಮತ್ತು ರೈತರಿಗಾಗಿ ಕೆಲಸ ಮಾಡಿಲ್ಲ. ಬದಲಾಗಿ, ತನ್ನ ಬಂಡವಾಳಶಾಹಿ ಸ್ನೇಹಿತರಿಗಾಗಿ ನಿರ್ಧಾರಗಳನ್ನು ತೆಗೆದುಕೊಂಡಿದೆ, ಅವರಿಗೆ ಲಾಭ ಪಡೆಯುವಂತೆ ಮಾಡಿದೆ. ಬಿಜೆಪಿ ಸರ್ಕಾರದ ನಿರ್ಧಾರಗಳಿಂದ ದೇಶದ ಆರ್ಥಿಕತೆ ನಾಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷ ಉಚಿತಶರ್ಟಿನ ಬಟನ್ ಸರಿಯಾಗಿ ಹಾಕಿಲ್ಲ ಎಂದು ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ;10 ಮಂದಿ ವಿರುದ್ಧ ಕೇಸುಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನ