Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೋಣಚಪ್ಪಳಿಯಲ್ಲಿ ನಿಯಮ ಉಲ್ಲಂಘಿಸಿ ಗಣರಾಜ್ಯೋತ್ಸವ ಆಚರಣೆ ಆರೋಪ

ಶಿಕ್ಷಕರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ದೇವದುರ್ಗ: ತಾಲ್ಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ದೇಶದ ಮಹತ್ವದ ರಾಷ್ಟ್ರೀಯ ಹಬ್ಬವಾದ ಜನವರಿ 26ರ ಗಣರಾಜ್ಯೋತ್ಸವವನ್ನು ನಿಯಮಾವಳಿಗಳ ಪ್ರಕಾರ ಆಚರಿಸದೆ, ಶಿಕ್ಷಕರಿಲ್ಲದೆ ಹಾಗೂ ಸಾರ್ವಜನಿಕರಿಗೆ ಆಹ್ವಾನಿಸದೇ ಅಲಕ್ಷ್ಯವಾಗಿ ಆಚರಿಸಲಾಗಿದೆ ಎನ್ನುವ ಗಂಭೀರ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ. ಈ ಘಟನೆಯು ಗ್ರಾಮದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಗಣರಾಜ್ಯೋತ್ಸವದಂತಹ ರಾಷ್ಟ್ರದ ಗೌರವದ ದಿನವನ್ನು ಶಾಲೆಯ ಶಿಕ್ಷಕರೇ ನಿರ್ಲಕ್ಷಿಸಿದರೆ ಮುಂದಿನ ಪೀಳಿಗೆಗೆ ಯಾವ ರೀತಿಯ ಸಂದೇಶ ಹೋಗಲಿದೆ ಎಂಬ ಪ್ರಶ್ನೆಯನ್ನು ಗ್ರಾಮಸ್ಥರು ಮುಂದಿಟ್ಟಿದ್ದಾರೆ. ಮಕ್ಕಳಲ್ಲಿ ರಾಷ್ಟ್ರಭಕ್ತಿ, ಸಂವಿಧಾನದ ಮಹತ್ವ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬೆಳೆಸಬೇಕಾದ ಶಿಕ್ಷಕರೇ ಈ ರೀತಿಯ ನಿರ್ಲಕ್ಷ್ಯ ತೋರಿರುವುದು ವಿಷಾದಕರ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾರ್ವಜನಿಕರು ಶಿಕ್ಷಕರನ್ನು ಪ್ರಶ್ನಿಸಿದಾಗ, ನದಿ ತೀರದ ಶಾಲೆಗಳಿಗೆ ಶಿಕ್ಷಕರೇ ಇಲ್ಲ. ನಾವೇನು ಮಾಡೋಣ?” ಎಂಬ ಉತ್ತರ ಲಭಿಸಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಉತ್ತರ ಮತ್ತಷ್ಟು ಜನಾಕ್ರೋಶಕ್ಕೆ ಕಾರಣವಾಗಿದ್ದು, ಶಿಕ್ಷಣ ಇಲಾಖೆಯ ಮೇಲಿನ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದೆ ಎನ್ನಲಾಗಿದೆ.

ಇದೇ ವೇಳೆ, ಸಂಘಟನೆಯೊಂದರ ಮುಖಂಡರು ಪತ್ರಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಶಾಸಕರು ಸದನದಲ್ಲಿ ಭಾಷಣ ಮಾಡುವುದನ್ನು ಬಿಟ್ಟರೆ ತಾಲ್ಲೂಕಿನ ಶಿಕ್ಷಣ ಅಭಿವೃದ್ಧಿಗೆ ಯಾವುದೇ ರೀತಿಯ ಗಮನ ನೀಡುತ್ತಿಲ್ಲ. ಪರಿಣಾಮವಾಗಿ ದೇವದುರ್ಗ ತಾಲ್ಲೂಕು ಶೈಕ್ಷಣಿಕವಾಗಿ ಸಂಪೂರ್ಣ ನಾಶದ ಹಾದಿಯಲ್ಲಿದೆ ಎಂದು ಆರೋಪಿಸಿದರು.

ಕೋಣಚಪ್ಪಳಿ ಗ್ರಾಮದಲ್ಲಿನ ಶಾಲೆಯಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾರ ಗಣರಾಜ್ಯೋತ್ಸವ ಆಚರಿಸದಿರುವುದು ಗಂಭೀರ ಲೋಪವಾಗಿದ್ದು, ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರ ಮೇಲೆ ತಕ್ಷಣವೇ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಅಲ್ಲದೆ, ತಾಲ್ಲೂಕಿನ ನದಿ ತೀರದ ಶಾಲೆಗಳಿಗೆ ಶಾಶ್ವತ ಶಿಕ್ಷಕರ ನೇಮಕ ಮಾಡಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ