LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹವಮಾನ ಆಧಾರಿತ ವಿಮಾ ಯೋಜನೆಗೆ  ರೈತರಿಂದ ವಿಮಾ ನೋಂದಣಿಗೆ ಅವಕಾಶ

 

 

ದಾವಣಗೆರೆ; ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ 2023-24ನೇ ಸಾಲಿನ ತೋಟಗಾರಿಕಾ ಬೆಳೆಗಳಿಗೆ ವಿಮಾ ನೋಂದಣಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮರು ವಿನ್ಯಾಸಗೊಳಿಸಿದ ಹವಮಾನ ಆಧಾರಿತ ವಿಮಾ ಯೋಜನೆ: ಅಡಿಕೆ ಬೆಳೆ ವಿಮೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ, ಎಲ್ಲಾ ಗ್ರಾಮ ಪಂಚಾಯಿತಿಗಳ ರೈತರು, ಕಾಳು ಮೆಣಸು ಬೆಳೆ ವಿಮೆಗೆ ಚನ್ನಗಿರಿ ತಾಲ್ಲೂಕಿನ ಆಯ್ದ ಗ್ರಾಮ ಪಂಚಾಯಿತಿಗಳ ರೈತರು, ದಾಳಿಂಬೆ ಬೆಳೆ ವಿಮೆಗೆ ಚನ್ನಗಿರಿ, ದಾವಣಗೆರೆ ಮತ್ತು ಜಗಳೂರು ತಾಲ್ಲೂಕಿನ ಆಯ್ದ ಗ್ರಾಮಗಳು, ಮಾವು ಬೆಳೆ ವಿಮೆಗೆ ಚನ್ನಗಿರಿ ತಾಲ್ಲೂಕಿನ ಆಯ್ದ ಗ್ರಾಮಗಳು, ವಿಳ್ಯದೆಲೆ ಬೆಳೆ ವಿಮೆಗೆ ಹೊನ್ನಾಳಿ, ನ್ಯಾಮತಿ, ಚನ್ನಗಿರಿ, ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಆಯ್ದ ಗ್ರಾಮಗಳ ರೈತರು ನೋಂದಣಿ ಮಾಡಿಸಬಹುದು.

ರೈತರು ತಮ್ಮ ಬೆಳೆಗಳಿಗೆ ವಿಮಾ ಕಂತನ್ನು ಹತ್ತಿರದ ಬ್ಯಾಂಕ್, ಗ್ರಾಮ ಒನ್, ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಿ ವಿಮಾ ಯೋಜನೆಗೆ ಪಾವತಿಸಿ ನೋಂದಾಹಿಸಬಹುದು. ನೋಂದಣಿಯಾಗಲು ಜುಲೈ.15 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್.ಡಿ.ಎಫ್.ಸಿ ಇಆರ್‍ಜಿಓ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಯ ಟೋಲ್ ಫ್ರೀ ನಂ.18002660700ಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ರೈತರು ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ