LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇ-ಆಸ್ತಿ, ಮುಟೇಷನ್ ಅರ್ಜಿ ದಾಖಲಿಸಲು ಅವಕಾಶ: ಪೌರಾಯುಕ್ತೆ ಲಕ್ಷ್ಮೀ.!

 

ಚಿತ್ರದುರ್ಗ: ಕರ್ನಾಟಕ ಒನ್‍ನಲ್ಲಿ ಇ-ಆಸ್ತಿ, ಮುಟೇಷನ್ ಅರ್ಜಿಗಳನ್ನು ದಾಖಲಿಸಲು ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಲಕ್ಷ್ಮೀ ತಿಳಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತಾ ಸೃಜನೆ ಮತ್ತು ಹಕ್ಕು ವರ್ಗಾವಣೆ ಮಾಡಲು ಇ-ಆಸ್ತಿ ತಂತ್ರಾಂಶ ಬಳಕೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿ ಸಲ್ಲಿಸುವ ಮತ್ತು ದಾಖಲೆಗಳ ಸ್ಕ್ಯಾನ್ ಮಾಡುವ ಒತ್ತಡ ಕಡಿಮೆ ಮಾಡುವ ದೃಷ್ಟಿಯಿಂದ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ.

ಚಿತ್ರದುರ್ಗ ನಗರಸಭೆಯಿಂದ ಅಧಿಕೃತವಾದ ಕರ್ನಾಟಕ ಒನ್ ಕೇಂದ್ರಗಳ ವಿಳಾಸ ಹಾಗೂ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ವಿವರ ಇಂತಿದೆ. ನಗರದ ಎಂ.ಎಸ್.ಬಿ.ಎಂ ರಸ್ತೆ, ಇ ಅಂಡ್ ಟಿ ಕ್ಲೀನಿಕ್ ಮುಂಭಾಗ-9164335550, ಭೀಮಪ್ಪನಾಯಕ ರಸ್ತೆಯ, ಒಕ್ಕಲಿಗರ ಹಾಸ್ಟೆಲ್ ಕಾಂಪ್ಲೆಕ್ಸ್ ಮಳಿಗೆ ಬಾಯ್ಸ್ ಕಾಲೇಜು ಮುಂಭಾಗ-789928692, ಜೆ.ಸಿ.ಆರ್. ಸರ್ಕಲ್ ಮುಖ್ಯರಸ್ತೆ-9060825090, ಚಿಕ್ಕಪೇಟೆ ಉಚ್ಚೆಂಗಿ ಯಲ್ಲಮ್ಮ ದೇವಸ್ಥಾನ ಹತ್ತಿರ-7019552892, ಜಿಲ್ಲಾ ಕೇಂದ್ರ ಗ್ರಂಥಾಲಯ ಮುಂಭಾಗ-8296151971, ಹೊಳಲ್ಕೆರೆ ರಸ್ತೆ, ಮಾರಮ್ಮ ದೇವಸ್ಥಾನ ಪಕ್ಕ-7019552892, ನಗರಸಭೆ ಮಳಿಗೆ ಯೂನಿಟಿ ಹೆಲ್ತ್ ಕಾಂಪ್ಲೆಕ್ಸ್ ಮುಂಭಾಗ-8861050659, ಹೊಳಲ್ಕೆರೆ ರಸ್ತೆ ನೀಲಕಂಠೇಶ್ವರ ದೇವಸ್ಥಾನದ ಪಕ್ಕ-7019024127, ಬ್ಯಾಂಕ್ ಕಾಲೋನಿ-8553905641, ಹೊಳಲ್ಕೆರೆಗೆ ಹೋಗುವ ಮುಖ್ಯ ರಸ್ತೆ ನೀಲಕಂಠೇಶ್ವರ ದೇವಸ್ಥಾನದ ಹತ್ತಿರ-9449441144 ಗೆ ಸಂಪರ್ಕಿಸಬಹುದು.

ಚಿತ್ರದುರ್ಗ ನಗರಸಭೆಯಿಂದ ಅಧಿಕೃತವಾದ ಕರ್ನಾಟಕ ಒನ್ ಕೇಂದ್ರಗಳಿಗೆ ಇ-ಆಸ್ತಿ ತಂತ್ರಾಂಶದ ಲಾಗಿನ್‍ಗಳನ್ನು ಸೃಜನೆ ಮಾಡಿ, ಅವರುಗಳಿಗೆ ಕಳೆದ ಡಿಸೆಂಬರ್ 05ರಂದು ಇ-ಆಸ್ತಿ, ಮುಟೇಷನ್ ಅರ್ಜಿಗಳನ್ನು ಅಗತ್ಯ ದಾಖಲೆಗಳನ್ನು ಪಡೆದು ಆನ್‍ಲೈನ್‍ನಲ್ಲಿ ದಾಖಲಿಸಲು ತರಬೇತಿ ನೀಡಲಾಗಿದೆ.

ಸಾರ್ವಜನಿಕರು ತಮ್ಮ ಸ್ವತ್ತುಗಳಿಗೆ ಇ-ಆಸ್ತಿ ಹಾಗೂ ಮ್ಯುಟೇಶನ್ (ಹಕ್ಕು ವರ್ಗಾವಣೆ) ಅರ್ಜಿಗಳನ್ನು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜೀಗಳನ್ನು ಸಲ್ಲಿಸಬಹುದಾಗಿದೆ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಅವರು ಕೋರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026