LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 7ರಂದು ಮತದಾನ: ಮತದಾರರ ಭಾವಚಿತ್ರದ ಗುರುತಿನ ಚೀಟಿಗೆ ಪರ್ಯಾಯ ದಾಖಲೆಗಳು

ಹೊಸಪೇಟೆ (ವಿಜಯನಗರ) ಮೇ.05 ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮೇ 7ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗೆ ಪರ್ಯಾಯ ದಾಖಲೆಗಳ ಮೂಲಕವು ಸಹ ಮತ ಚಲಾವಣೆ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ನೋಂದಾಯಿತ ಮತದಾರರು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹೊರತುಪಡಿಸಿ ಆಧಾರ್ ಕಾರ್ಡ್, ನರೇಗಾ ಜಾಬ್‌ಕಾರ್ಡ್, ಬ್ಯಾಂಕ್ ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್‌ಬುಕ್, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆ ಕಾರ್ಡ್, ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್), ವಿಶೇಷ ಚೇತನರ ಗುರುತಿನ ಚೀಟಿ, ಪ್ಯಾನ್‌ಕಾರ್ಡ್, ಎಂ.ಪಿ.ಆರ್‌ನ ಅಡಿಯಲ್ಲಿ ಆರ್.ಜಿ.ಐ ನೀಡಿರುವ ಸ್ಮಾಟ್‌ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಕೇಂದ್ರ/ರಾಜ್ಯ/ಪಿ.ಎಸ್.ಯು ಗಳ ಸೇವಾ ಗುರುತಿನ ಚೀಟಿ, ಎಂ.ಪಿ/ಎA.ಎಲ್.ಎ/ಎA.ಎಲ್.ಸಿ ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಯಂತಹ ಪರ್ಯಾಯ ದಾಖಲೆಗಳನ್ನು ಮತಗಟ್ಟೆಗಳಲ್ಲಿ ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮೇ 6ರಂದು ಮಸ್ಟರಿಂಗ್ ಕಾರ್ಯ ಮತ್ತು ಜೂನ್ 4ರಂದು ಮತ ಎಣಿಕೆ ನಡೆಯಲಿದೆ.
ಒಟ್ಟು 11,28,835 ಮತದಾರರು: 9 ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬAಧಿಸಿದAತೆ ಹಡಗಲಿ ಕ್ಷೇತ್ರದಲ್ಲಿ 218, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ 254, ವಿಜಯನಗರ ಕ್ಷೇತ್ರದಲ್ಲಿ 259, ಕೂಡ್ಲಿಗಿ ಕ್ಷೇತ್ರದಲ್ಲಿ 250 ಮತ್ತು 13 ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹರಪನಹಳ್ಳಿ ಕ್ಷೇತ್ರದಲ್ಲಿ 253 ಸೇರಿ ಒಟ್ಟು 1234 ಮತಗಟ್ಟೆಗಳಿದ್ದು ಅಂತಿಮ ಮತದಾರರ ಪಟ್ಟಿಯಂತೆ 5,62,166 ಪುರುಷ ಮತದಾರರು, 5,66,527 ಮಹಿಳಾ ಮತದಾರರು ಹಾಗೂ 142 ಇತರೆ ಮತದಾರರು ಸೇರಿದಂತೆ ಒಟ್ಟು 11,28,835 ಮತದಾರರಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಅನುಕೂಲವಾಗಲು ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಿಕಲಚೇತನರಿಗೆ ರೇಲಿಂಗ್ ಸಹಿತ ರಾಂಪ್, ನೆರಳು ಹಾಗೂ ವಿದ್ಯುತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು