LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜೀನಾಮೆ ನೀಡಲು ಸಿದ್ಧ ಎಂದ ಅಮಿತ್ ಶಾ!

ನವದೆಹಲಿ: ಅಂಬೇಡ್ಕರ್ ಕುರಿತು ಅಮಿತ್ ಶಾ ರಾಜ್ಯಸಭೆಯ ಭಾಷಣದಲ್ಲಿ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅಮಿತ್ ಶಾ, ನಾನು ರಾಜೀನಾಮೆ ನೀಡಬೇಕೆಂದು ಮಲ್ಲಿಕಾರ್ಜುನ್ ಖರ್ಗೆ ಬಯಸಿದ್ದರೆ ಅದಕ್ಕೆ ನಾನು ಸಿದ್ಧ ಎಂದಿದ್ದಾರೆ. ಅಮಿತ್ ಶಾ ನೀಡಿದ ಈ ಹೇಳಿಕೆ ಬೆನ್ನಲ್ಲೇ ಅವರು ನಿಜವಾಗಿಯೂ ರಾಜೀನಾಮೆ ಕೊಡ್ತಾರಾ ಎಂಬ ಚರ್ಚೆಗಳು ಶುರುವಾಗಿವೆ.

ಇದೇ ವೇಳೆ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಹಿಂದಿನಿಂದಲೂ ಹೇಳಿಕೆಗಳನ್ನು ತಿರುವುಚುವುದ, ಅಂಕಿ ಅಂಶಗಳನ್ನು ಮರೆಮಾಚುವುದು ಮಾಡುತ್ತಿದೆ. ನಾನು ರಾಜ್ಯಸಭೆಯಲ್ಲಿ ಮಾತನಾಡಿರುವುದು ರೆಕಾರ್ಡ ಇದೆ. ಇದರ ಸಂಪೂರ್ಣ ಭಾಷಣವನ್ನು ಕೇಳಿಸಿಕೊಳ್ಳಿ. ಮಾಧ್ಯಮಗಳು ನನ್ನ ಸಂಪೂರ್ಣ ಭಾಷಣವನ್ನು ಜನರ ಮುಂದೆ ತಲುಪಿಸಿ.

ಕತ್ತರಿ ಹಾಕಿ ಬೇರೊಂದು ಅರ್ಥದಲ್ಲಿ ತೋರಿಸಬೇಡಿ ಎಂದು ಮನವಿ ಮಾಡಿದ್ದರೆ. ಕಾಂಗ್ರೆಸ್ ಯಾವತ್ತೂ ಸಂವಿಧಾನ ವಿರೋಧಿ, ಅಂಬೇಡ್ಕರ್ ವಿರೋಧಿ, ಮೀಸಲಾತಿ ವಿರೋಧಿಯಾಗಿದೆ. ಸಂವಿಧಾನವನ್ನು ತುರ್ತು ಪರಿಸ್ಥಿತಿಯಲ್ಲಿ ಬಡುಮೇಲು ಮಾಡಿರುವುದು ಎಲ್ಲರೂ ನೋಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆ