LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನನ್ಯಾ ಭಟ್ ನಿಜವಾಗ್ಲೂ ಸುಜಾತಾ ಭಟ್ ಮಗಳಾ? ಧರ್ಮಸ್ಥಳದ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್

ಧರ್ಮಸ್ಥಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ನಿವಾಸಿ ಸುಜಾತಾ ಭಟ್ ಎಂಬುವರ ಪುತ್ರಿ ಅನನ್ಯಾ ಭಟ್ ನಾಪತ್ತೆ ಹಾಗೂ ಕೊಲೆ ಆರೋಪ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಇದೀಗ ಎಸ್ಐಟಿ ಅಧಿಕಾರಿಗಳು ಅನನ್ಯಾ ಭಟ್ ನಾಪತ್ತೆ ಪ್ರಕರಣದ ಹಿಂದೆ ಬಿದ್ದಿದ್ದಾರೆ. ಪೊಲೀಸರಿಗೆ ಸಿಕ್ಕ ಮಾಹಿತಿಯಾದರೂ ಏನು? ಸುಜಾತಾ ಭಟ್‌ಗೆ ಮದುವೆಯೇ ಆಗಿಲ್ಲ, ಮಕ್ಕಳೇ ಇಲ್ಲ ಎನ್ನಲಾಗುತ್ತಿದೆ. ಹಾಗಿದ್ದರೆ ಅನನ್ಯಾ ಭಟ್ ಯಾರು?

ಒಟ್ಟಾರೆ, ಧರ್ಮಸ್ಥಳದಲ್ಲಿ ಕಾಣೆಯಾಗಿದ್ದರೆನ್ನಲಾದ ಅನನ್ಯ ಭಟ್ ನಾಪತ್ತೆ ಕೇಸ್‌ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ತಾಯಿ ಸುಜಾತಾ ಭಟ್‌ಗೂ ಶಿವಮೊಗ್ಗದ ರಿಪ್ಪನಪೇಟೆಗೂ ಲಿಂಕ್ ಇದೆ. ಸುಜಾತಾ ಭಟ್ ನೀಡಿದ ದೂರಿನ ಮೇರೆಗೆ ಎಸ್ಐಟಿ ಅಧಿಕಾರಿಗಳು ಅನನ್ಯ ಭಟ್ ಕೇಸಿನ ಹಿಂದೆ ಬದ್ದಿದ್ದು, ಕೆಲವೊಂದಿಷ್ಟು ಮಾಹಿತಿಯನ್ನು ಕಲೆಹಾಕಿದ್ದಾರೆ. ಇನ್ನು ಸುಜಾತಾ ಭಟ್ ಮದುವೆಯಾಗದೆ ಪ್ರಭಾಕರ್ ಬಾಳಿಗ ಎನ್ನುವರ ಜತೆ ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದರು. ಆದ್ರೆ ಇಬ್ಬರಿಗೂ ಯಾವುದೇ ಮಗು ಆಗಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಹೀಗಾಗಿ ಅನನ್ಯ ಭಟ್ ಇದ್ದಳೋ ಇಲ್ವೋ ಎನ್ನುವುದೇ ನಿಗೂಢವಾಗಿದೆ.

ಧರ್ಮಸ್ಥಳದಲ್ಲಿ ಸುಜಾತಾ ಭಟ್ ಮಗಳು ಅನನ್ಯ ಭಟ್ ಮಿಸ್ಸಿಂಗ್ ಕೇಸ್ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಮಾಡಲಿಲ್ಲ ಎನ್ನುವ ಆರೋಪ ಸುಜಾತಾ ಮಾಡಿದ್ದರು. ಈ ನಡುವೆ ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಕುರಿತು ಅನಾಮಿಕ ವ್ಯಕ್ತಿಯು ದೂರು ನೀಡಿದ್ದ. ಈ ನಡುವೆ ತನಿಖೆಯನ್ನು ಎಸ್‌ಐಟಿ ಆರಂಭಿಸಿದೆ. ಈ ನಡುವೆ ಸುಜತಾ ಭಟ್ ತನ್ನ ಮಗಳ ಮಿಸ್ಸಿಂಗ್ ಪ್ರಕರಣವನ್ನು ಮುನ್ನಲೆಗೆ ತಂದಿದ್ದು, ಈ ಸಂಬಂಧ ಎಸ್ ಐಟಿ ಮುಂದೆ ಮಗಳ ಅನನ್ಯ ಭಟ್ ಮಿಸ್ಸಿಂಗ್ ಕೇಸ್ ಕುರಿತು ಮತ್ತೆ ದೂರು ನೀಡಿದ್ದಾರೆ. ಅನನ್ಯ ಭಟ್ ಧರ್ಮಸ್ಥಳದಲ್ಲಿ ಮಿಸ್ಸಿಂಗ್ ಬಳಿಕ ಏನಾದಳು ಎನ್ನುವುದು ನಿಗೂಢವಾಗಿತ್ತು.

ಎಲ್ಲರಿಗೂ ಅನನ್ಯ ಭಟ್ ಮೆಡಿಕಲ್ ಓದಲು ಹೋಗಿ ವಾಪಸ್ ಜೀವಂತ ಬರಲಿಲ್ಲ ಎನ್ನುವಂತಾಗಿತ್ತು. ಈ ನಡುವೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಸುಜತಾ ಭಟ್ ನೀಡಿರುವ ದೂರು ಮತ್ತು ಆಕೆಯ ಹಿನ್ನೆಲೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುಜಾತಾ ಭಟ್‌ಗೆ ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನಪೇಟೆಗೆ ನಂಟು ಇರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡವು ರಿಪ್ಪನ್‌ಪೇಟೆಗೆ ಬಂದು ವಿಚಾರಣೆ ಮಾಡಿ ಹೋಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎಸ್ ಐಟಿ ತಂಡದ ಅಧಿಕಾರಿಗಳು ಸುಜಾತ ಭಟ್ ಬಗ್ಗೆ ಒಂದಿಷ್ಟು ಮಾಹಿತಿ ಕಲೆಹಾಕಿದ್ದಾರೆ.

1999 ರಿಂದ 2007 ರ ವರೆಗೆ ಸುಜಾತಾ ಭಟ್ ರಿಪ್ಪನಪೇಟೆಯಲ್ಲಿ ವಾಸವಾಗಿದ್ದಳು. ರಿಪ್ಪನಪೇಟೆಯ ಹೊಸನಗರ ರಸ್ತೆ ಬಳಿ ಪ್ರಭಾಕರ್ ಬಾಳಿಗ ಜೊತೆ ಮದುವೆಯಿಲ್ಲದೇ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಆದರೆ, ಪ್ರಭಾಕರ್ ಮತ್ತು ಸುಜಾತಾ ಇಬ್ಬರು ದಂಪತಿಗಳೆಂದು ಎಲ್ಲರೂ ಅಂದುಕೊಂಡಿದ್ದರು. ಆದ್ರೆ ಈಗ ಅವರಿಬ್ಬರು ಮದ್ವೆಯಾಗದೇ ರಿಲೇಶನ್ ಶಿಪ್ ನಲ್ಲಿದ್ದರು ಎನ್ನುವುದು ಈಗ ಬಹಿರಂಗವಾಗಿದೆ. ಪ್ರಭಾಕರ್ ಈಗಾಗಲೇ ಮೃತಪಟ್ಟಿದ್ದಾರೆ. ಇನ್ನೂ ಸುಜಾತಾ ಭಟ್ ರಿಪ್ಪನಪೇಟೆಯಲ್ಲಿ ಪ್ರಕಾರ್ ಜೊತೆ ಸಂಸಾರ ಮಾಡುವ ಸಂದರ್ಭದಲ್ಲಿ ಮಕ್ಕಳು ಇರುವ ಯಾವುದೇ ಸುಳಿವಿಲ್ಲ. ಎರಡು ನಾಯಿಗಳನ್ನೇ ತಮ್ಮ ಮಕ್ಕಳು ಎಂದುಕೊಂಡು ಆರೈಕೆ ಮಾಡುತ್ತಿದ್ದರು.

ಇವರ ಈ ನಿಸ್ವಾರ್ಥ ಸೇವೆ ನೋಡಿ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೀಗೆ ಸುಜಾತಾ ಭಟ್ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮದುವೆಯಾಗದೇ ಅವರ ಪ್ರಭಾಕರ್ ಹಾಗೂ ಸುಜಾತಾ ಭಟ್ ಪತಿ- ಪತ್ನಿಯಾಗಿದ್ದರು. ಇದಕ್ಕೆ ಪೂರಕವೆಂಬಂತೆ ಸುಜಾತಾ ಭಟ್ ರಿಪ್ಪನಪೇಟೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2004 ರಲ್ಲಿ ತೇಜಸ್ವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯತ್ವ ಪಡೆದಿದ್ದಳು. ರಜಿಸ್ಟರ್ ನಲ್ಲಿ ಸುಜಾತಾ ಬಾಳಿಗ ಹೆಸರಿನಲ್ಲಿ ಹಸ್ತಾಕ್ಷರ ಕಂಡುಬಂದಿದೆ. ಇದರ ನಂತರ 2007 ರ ನಂತರ ಸೊಸೈಟಿಯಲ್ಲಿ ಯಾವುದೇ ಹಣಕಾಸಿನ ವ್ಯವಹಾರ ಇಟ್ಟುಕೊಂಡಿರಲಿಲ್ಲ. ಸಂಘದ ಹೆಸರಿನಲ್ಲಿ ಒಂದಿಷ್ಟು ಸಾಲ ಪಡೆದಿದ್ದಳು.

ಅದನ್ನು ವಾಪಸ್ ಕಟ್ಟಿರಲಿಲ್ಲ. ಪ್ರಭಾಕರ್ ಬೀಡಾ ಅಂಗಡಿ ಇಟ್ಟುಕೊಂಡಿದ್ದರು. ಆತನ ಎಲ್ಲ ಹಣಕಾಸಿನ ವ್ಯವಹಾರವನ್ನು ಸುಜಾತಾ ಅವರೇ ನೋಡಿಕೊಳ್ಳುತ್ತಿದ್ದರು. ಎಸ್ ಐಟಿ ಅಧಿಕಾರಿಗಳು ಈಗ ಸುಜಾತ ಈ ಹಿಂದೆ ವಾಸವಿದ್ದ ಮತ್ತು ಅವಳ ಚಟುವಟಿಕೆಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ನಡುವೆ ಸುಜಾತ ಭಟ್ ಗೆ ಯಾವುದೇ ಮಕ್ಕಳು ಇರಲಿಲ್ಲ ಎನ್ನುವುದು ಸ್ಥಳೀಯರಿಗೆ ಕಂಡು ಬಂದಿದೆ. ಆದ್ರೆ, ಧರ್ಮಸ್ಥಳದಲ್ಲಿ ಈಗ ಮಗಳಿದ್ದಳು. ಅವಳು ಮಿಸ್ಸಿಂಗ್ ಆಗಿದೆ ಎನ್ನುವ ಹೇಳಿಕೆಗಳು ಬಾರೀ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ನಾಪತ್ತೆ ಬಳಿಕ ಈಗ ಅನನ್ಯ ಭಟ್ ನಾಪತ್ತೆ ಕೇಸ್ ಕುರಿತು ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥದಲ್ಲಿ ನಾಪತ್ತೆ ಆಗಿರುವುದು ನಿಜವೋ ಅಥವಾ ಸುಳ್ಳೋ ಎನ್ನುವುದರ ಹಿಂದೆ ಎಸ್‌ಐಟಿ ಅಧಿಕಾರಿಗಳು ಬಿದ್ದಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಸುಜಾತಾ ಭಟ್ ಕುರಿತು ಒಂದಿಷ್ಟು ಮಹತ್ವದ ಸಂಗತಿಗಳು ಪೊಲೀಸರಿಗೆ ಸಿಕ್ಕಿವೆ. ಅನನ್ಯ ಮಿಸ್ಸಿಂಗ್ ಕೇಸ್ ಮತ್ತೆ ಯಾವ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ‌.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026