ಹೈದರಾಬಾದ್: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.
ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪವನ್ ಕಲ್ಯಾಣ್ ಅವರು ತೀವ್ರ ಬಳಲಿದ್ದು, ಕೂಡಲೇ ಅವರ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ತಪಾಸಣೆ ಸೇರಿ ನಂತರ ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪವನ್ ಕಲ್ಯಾಣ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಚೇತರಿಕೆಗೆ ಪ್ರಧಾನಿ ಮೋದಿ ಹಾಗೂ ನಟ ಚಿರಂಜೀವಿ ಸೇರಿದಂತೆ ಹಲವು ಗಣ್ಯರು ಪ್ರಾರ್ಥಿಸಿದ್ದಾರೆ.
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ. ಅವರ ಪತ್ನಿ ಅನ್ನಾ ಕೊನಿಡೇಲಾ ಈಗ ಅವರ ಸ್ಥಿತಿಯ ಕುರಿತು ನವೀಕರಣವನ್ನು ಹಂಚಿಕೊಂಡಿದ್ದಾರೆ. “ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎಲ್ಲವೂ ಚೆನ್ನಾಗಿದೆ. ಧನ್ಯವಾದಗಳು” ಎಂದು ತಿಳಿಸಿದ್ದಾರೆ.