LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.03ರಿಂದ ಅಂಗನವಾಡಿ ಬಂದ್: ಅನಿರ್ಧಿಷ್ಟಾವಧಿ ಪ್ರತಿಭಟನೆ.

ಗಂಗಾವತಿ: ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ (ಇಸಿಸಿಇ)  ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಕ.ಕ ಭಾಗದ 7 ಜಿಲ್ಲೆಗಳಲ್ಲಿ ಇಸಿಸಿಇ ಆರಂಭಿಸಲು ಏಕಾಏಕಿ ಆದೇಶ ನೀಡಿದ್ದು, ಇದರಿಂದ ಕ.ಕ ಭಾಗದ ಜಿಲ್ಲೆಗಳ 39 ತಾಲ್ಲೂಕುಗಳಲ್ಲಿ 1170 ಅಂಗನವಾಡಿ ಕೇಂದ್ರಗಳು ಮುಚ್ಚಲಿದ್ದು, ಈ ಸುತ್ತೋಲೆ ತಕ್ಷಣ ವಾಪಾಸ್ಸಿಗೆ ಆಗ್ರಹಿಸಿ ಮುಂದಿನ ತಿಂಗಳ ದಿ.3ರಂದು ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಅಂಗನವಾಡಿ ನೌಕರರು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಗುಲ್ವರ್ಗಾ ಚಲೋ ಅಭಿಯಾನ ನಡೆಸಲು ನರ್ಧಸಲಾಗಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದರು.ಶನಿವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಪ್ರದರ್ಶಿಸಿ ಅವರು ಮಾತನಾಡಿ, ರಾಷ್ಟ್ರೀಯ ಮಕ್ಕಳ ಶಿಕ್ಷಣ ನೀತಿಯ ಭಾಗವಾಗಿ ಲೀಗ್ ಆಫ್ ನೇಷನ್ ರಾಷ್ಟ್ರಗಳು ಯುನಿಸೆಫ್ ಸಂಸ್ಥೆ ಮುಖಾಂತರ 6 ವರ್ಷದ ಮಕ್ಕಳು ದೇಶದ ಸಂಪತ್ತು, ಸಮಾಜದ ಪುನರುತ್ಪಾದನೆ ಎಂದು ಭಾರತದಲ್ಲಿ ಐಸಿಡಿಎಸ್ ಯೋಜನೆ ಆರಂಭಿಸಿತ್ತು.

ಅಪೌಷ್ಟಿಕತೆ ನಿವಾರಣೆ, ಮರಣ ಪ್ರಮಾಣ ಕಡಿ ಮೆ, ಗರ್ಭಿಣಿ ಸ್ತ್ರಿಯರ ಆರೈಕೆಯಾಗಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಬೆಕೆಂಬ ಸ್ಪಷ್ಟತೆಯು ದೊರೆಯಿತು. ಆದರೆ ರಾಜ್ಯ ಸರ್ಕಾರದ ಶಿಕ್ಷಣ ಇಲಾಕೆಯ ಇತ್ತೀಚಿಗೆ ಹೊರಡಿಸಿದ ಸುತ್ತೋಲೆಯಿಂದ ಆರು ವರ್ಷದೊಳಗಿನ ಮಕ್ಕಳ ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶಯುವ ಆಹಾರ ಸಿಗದೇ ಮರಣದ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.ರಾಜ್ಯ ಸರಕಾರ ಆದೇಶ ನೀಡಿಲ್ಲ ಬದಲಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮಾತ್ರ ಈ ವಿಧಾನ ಅನುಸರಿಸುವ ಆದೇಶ ಹೊರಡಿಸಲಾಗಿದೆ ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಉದ್ಯೋಗ ಕಳೆದುಕೊಳ್ಳಲಿದ್ದು ಕೂಡಲೆ ಆದೇಶ ಹಿಂಪಡೆಯಬೇಕು. ಈಗಿರುವ ಅಂಗನಾವಡಿ ಕೇಂದ್ರಗಳಿಗೆ ಮೂಲ ಸೌಕರ್ಯ ನೀಡಿ ಅಲ್ಲಿಯೇ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಬೇಕು,ಕೂಡಲೆ ಸರ್ಕಾರ ಮತ್ತು ಕಲಬುರಗಿ ಆಯುಕ್ತರು ಇಸಿಸಿಇ ಶಿಕ್ಷಣ ಪ್ರಾರಂಭಿಸಲು ಹೊರಡಿಸಿದ ಆದೇಶವನ್ನು ಹಿಂಪಡೆ ದು, ಐಸಿಡಿಎಸ್ ಆದೇಶವನ್ನು ಮುಂದುವರೆಸಬೇಕು. ಇಲ್ಲ ವಾದಲ್ಲಿ ಅಂಗನವಾಡಿ ನೌಕರರಿಂದ ಉಗ್ರಹೋರಾಟ ನಡೆ ಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜಾ ದರೋಜಿ, ಗಂಗಾವತಿ ತಾಲೂಕಾ ಅಧ್ಯಕ್ಷ ಮಂಜುನಾಥ್ ಇದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು