LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಣಿಕ್ಯ ಪ್ರಕಾಶನದ 2024ರ ದತ್ತಿ ಪ್ರಶಸ್ತಿಗಳ ಪ್ರಕಟಣೆ

ಹಾಸನ : ಹಾಸನದ ಮಾಣಿಕ್ಯ ಪ್ರಕಾಶನವು ಕಳೆದ ಒಂಭತ್ತು ವರ್ಷಗಳಿಂದ ಸಾಹಿತ್ಯ ಕ್ಷೇತ್ರದ ವಿವಿದ ಪ್ರಕಾರಗಳ ಕೃತಿಗಳಿಗೆ ದತ್ತಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



೨೦೨೪ ರ ದತ್ತಿ ಪ್ರಶಸ್ತಿಗೆ ೨೦೨೩ ರಲ್ಲಿ ಮೊದಲ ಮುದ್ರಣವಾದ ಸ್ವತಂತ್ರ ರಚನೆಯ ನಾಟಕ, ಕಾದಂಬರಿ, ಗಜಲ್ ಹಾಗೂ ಚುಟುಕು ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಲೇಖಕರು ನಿರೀಕ್ಷೆಗೂ ಮೀರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಿದ್ದರು. ಅವುಗಳಲ್ಲಿ ಸಾಹಿತಿಗಳಾದ ಕೊಟ್ರೇಶ್ ಎಸ್. ಉಪ್ಪಾರ್, ಡಾ. ಹಸೀನಾ ಎಚ್.ಕೆ, ನಾಗರಾಜ್ ದೊಡ್ಡಮನಿ, ಎಚ್.ಎಸ್.ಬಸವರಾಜ್, ವಾಸು ಸಮುದ್ರವಳ್ಳಿ, ಲತಾಮಣಿ ಎಂ.ಕೆ. ತುರುವೇಕೆರೆ ಅವರನ್ನೊಳಗೊಂಡ ಆಯ್ಕೆ ಸಮಿತಿಯು..

ನಾಟಕ ವಿಭಾಗದ “ಪ್ರಭಾವತಿ ಶೆಡ್ತಿ ದತ್ತಿ - ನಾಟಕ ಮಾಣಿಕ್ಯ ಪ್ರಶಸ್ತಿ” ಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಸಾವಿತ್ರಿ ಮನೋಹರ್ ಅವರ “ನಮ್ಮ ಸಂಸಾರ ಆನ್ ಲೈನ್ ಅವಾಂತರ” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.



ಕಾದಂಬರಿ ವಿಭಾಗದ ತುಮಕೂರಿನ ಮೋಹನ್ ಎಂ. ಕೆ. ತುರುವೇಕೆರೆ ಪ್ರಾಯೋಜಕತ್ವದ “ದಿ. ಮಹಾದೇವಮ್ಮ ಈ. ಕೃಷ್ಣಯ್ಯ ಸ್ಮಾರಕ ದತ್ತಿ – ಕಾದಂಬರಿ ಮಾಣಿಕ್ಯ ಪ್ರಶಸ್ತಿ” ಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ವೀಣಾ ರಾವ್ ಅವರ “ಮಧುರ ಮುರುಳಿ” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.


ಗಜಲ್ ವಿಭಾಗದ ಶಿವಮೊಗ್ಗದ ಪಾರಂಪರಿಕ ವೈದ್ಯರಾದ ಸೈಯದ್ ಮುಹುಬುಲ್ಲಾ ಖಾದ್ರಿ ಪ್ರಾಯೋಜಕತ್ವದ “ದಿ. ಫಾತಿಮಾಭಿ ಜನಾಬ್ ಸೈಯದ್ ಅಬ್ದುಲ್ ಘನೀ ಸಾಬ್ ಸ್ಮಾರಕ ದತ್ತಿ – ಗಜಲ್ ಮಾಣಿಕ್ಯ ಪ್ರಶಸ್ತಿ” ಗೆ ಬೆಳಗಾವಿ ಜಿಲ್ಲೆಯ ಈಶ್ವರ ಮಮದಾಪೂರ ಅವರ “ಕಣ್ಣೊಳಗಿನ ಕಣ್ಣು” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.


ಚುಟುಕು ಸಾಹಿತ್ಯ ವಿಭಾಗದ ರಾಯಚೂರಿನ ರೇಷ್ಮಾ ಕಂದಕೂರು ಪ್ರಾಯೋಜಕತ್ವದ “ಕೆ. ವೈ. ಕಂದಕೂರ ದತ್ತಿ – ಚುಟುಕು ಮಾಣಿಕ್ಯ ಪ್ರಶಸ್ತಿ” ಗೆ ಬಾಗಲಕೋಟ ಜಿಲ್ಲೆಯ ಮುರ್ತುಜಾಬೇಗಂ ಕೊಡಗಲಿಯವರ “ಗಿಲಿಗಿಂಚಿ” ಕೃತಿ ಆಯ್ಕೆಯಾಗಿದ್ದು ಪ್ರಶಸ್ತಿ ಜೊತೆಗೆ ೨೫೦೦ ನಗದು ಪುರಸ್ಕಾರ ಹೊಂದಿದೆ.


ಪ್ರಶಸ್ತಿ ಪುರಸ್ಕೃತರಿಗೆ ೨೦೨೪ ಸೆಪ್ಟಂಬರ್ ೨೮ ಶನಿವಾರ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಎಂಟನೇ ಕವಿ-ಕಾವ್ಯ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು