ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 07 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಧಾರವಾಡ: ಧಾರವಾಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 07 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ವೈದ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತಾತ್ಕಾಲಿಕ ನೇಮಕಾತಿಯನ್ನು ರೋಸ್ಟರ ಕಂ ಮೆರಿಟ್ ಆಧಾರದ ಮೇಲೆ ಮಾಡಲಾಗುವುದು. ಫೆಬ್ರವರಿ 23, 2026 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರಗೆ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ (ಕೆ.ಸಿ.ಪಾರ್ಕ್ ಹತ್ತಿರ) ಯಲ್ಲಿ ನೇರ ಸಂದರ್ಶನ ನಡೆಸಲಾಗುವುದು.
ಅಭ್ಯರ್ಥಿಗಳು ಸಾಕಷ್ಟು ಪ್ರಮಾಣದಲ್ಲಿ ಹಾಜರಾಗದಿದ್ದಲ್ಲಿ ಪ್ರತಿ ಸೋಮವಾರ ನೇರ ಸಂದರ್ಶನವನ್ನು ಎಲ್ಲ ಹುದ್ದೆಗಳು ಭರ್ತಿ ಆಗುವವರೆಗೆ ನಡೆಸಲಾಗುವುದು, ಆಸಕ್ತ ಅರ್ಹ ವೈದ್ಯರು ಸದರ ದಿನದಂದು ಅವಶ್ಯಕ ದೃಢೀಕೃತ ದಾಖಲಾತಿಗಳೊಂದಿಗೆ ಖುದ್ದಾಗಿ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.