LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫ್ಯಾಶನ್ ಡಿಸೈನಿಂಗ್, ಟೈಲರಿಂಗ್: ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ



ಕೊಪ್ಪಳ ಏಪ್ರಿಲ್ 24: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ವತಿಯಿಂದ ಯುವ ನಿಧಿ ಮತ್ತು ಮಹಿಳಾ ಫಲಾನಭವಿಗಳಿಗೆ ಉಚಿತವಾಗಿ ಫ್ಯಾಶನ್ ಡಿಸೈನಿಂಗ್ & ಟೈಲರಿಂಗ್ ಕುರಿತು 24 ದಿನಗಳ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಪ್ರಾರಂಭಿಸುವ ಆಸಕ್ತರುಗಳಿಗಾಗಿ ಕೊಪ್ಪಳದಲ್ಲಿ ಫ್ಯಾಶನ್ ಡಿಸೈನಿಂಗ್ & ಟೈಲರಿಂಗ್ ಬಗ್ಗೆ 24 ದಿನಗಳ ಕೌಶಲ್ಯಾಧಾರಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಯಾವುದೆ ತಾಲೂಕಿನ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗುವದು.

ಈ ಕಾರ್ಯಕ್ರಮದಲ್ಲಿ ಆಯಾ ವೃತ್ತಿಗಳಲ್ಲಿ ಕೌಶಲ್ಯದ ಪ್ರಾಯೋಗಿಕ ಹಾಗೂ ಸಿದ್ಧಾಂತದೊAದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ, ಮಾಹಿತಿ ನೀಡಲಾಗುವದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವದು. ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಅರ್ಹರಿಗೆ ಸರ್ಕಾರಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ ಶಿಫಾರಸ್ಸು ಮಾಡಲಾಗುವದು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವ 18 ರಿಂದ 35 ವರ್ಷದೊಳಗಿನ, ಕನಿಷ್ಠ SSಐಅ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು. ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ-583231 ಇಲ್ಲಿಗೆ ಏಪ್ರಿಲ್ 28 ರೊಳಗಾಗಿ ಭೇಟಿ ನೀಡುವದು ಅಥವಾ ಮೋಬೈಲ್ ಸಂಖ್ಯೆ 7204016012 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು