LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

 

 

ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ತು 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು 2023ರ ಆಗಸ್ಟ್ 31 ಕೊನೆ ದಿನಾಂಕವಾಗಿದ್ದು, 2023 ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ.50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25 ಗಳ ಶುಲ್ಕ ಪಾವತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ದಿನಾಂಕ ಜುಲೈ 1 ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ರೂ. 30 ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುವುದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-560017, ದೂರವಾಣಿ ಸಂಖ್ಯೆ 080-26612991, 22423867, 26623584 ಗೆ ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ