ನೇಕಾರರ ಮಕ್ಕಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಬೆಂ.ಗ್ರಾ.ಜಿಲ್ಲೆ: 2024-25ನೇ ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು“ವಿದ್ಯಾರ್ಥಿವೇತನ”ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವ ವಿದ್ಯಾಲಯಗಳಲ್ಲಿ ಪದವಿಯ ಇತ್ಯಾದಿ, ಎಲ್.ಎಲ್.ಬಿ/ ಪ್ಯಾರಾ ಮೆಡಿಕಲ್/ ಬಿ.ಫಾರ್ಮ್/ ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗಳು, ಎಂಬಿಬಿಎಸ್/ ಬಿ.ಇ/ ಬಿ.ಟೆಕ್ ಮತ್ತುಎಲ್ಲಾ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾsಸಂಗ ಮಾಡುತ್ತಿರುವ ನೇಕಾರರ ಮಕ್ಕಳು ಡಿ. 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಪದವಿಯ ಮುಂಚೆ ಪಿಯುಸಿ/ಐಟಿಐ/ಡಿಪ್ಲೊಮೋ ರೂ.2,500/- ರಿಂದ ರೂ. 3,000/-, ಎಲ್ಲಾ ಬಿ.ಎ/ಬಿ.ಎಸ್.ಸಿ/ಬಿ.ಕಾಂ ಇತ್ಯಾದಿ ರೂ. 5,000/- ರಿಂದ ರೂ. 5,500/-, ಎಲ್.ಎಲ್.ಬಿ/ ಪ್ಯಾರ ಮೆಡಿಕಲ್/ ಬಿ ಫಾರ್ಮ್/ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗಳು ರೂ. 7,500/- ರಿಂದ ರೂ. 8000/-, ಎಂಬಿಬಿಎಸ್/ ಬಿ.ಇ/ ಬಿ.ಟೆಕ್ ಮತ್ತುಎಲ್ಲಾ ಸ್ನಾತಕೋತ್ತರ ಕೋರ್ಸ್ಗಳು ರೂ. 10,000/- ರಿಂದ ರೂ. 11,000/- ಈ ರೀತಿ ವಿದ್ಯಾರ್ಥಿ ವೇತನದ ಸದುಪಯೋಗ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.