LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ





ಶಿವಮೊಗ್ಗ: ಫೆಬ್ರವರಿ 11,  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇತರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಡಿ.ಬಿ.ಸಿ.ಡಿ.ಸಿ. ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ www.dbcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ,ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸುವುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು