Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪತ್ರಿಕೋದ್ಯಮ, ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ತುಮಕೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ೨೦೨೪-೨೫ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಈ ತರಬೇತಿಯು ೨೦೨೫ನೇ ದಿನದರ್ಶಿ(ಕ್ಯಾಲೆಂಡರ್)ಯ ಜನವರಿ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್ ೨೦೨೫ಕ್ಕೆ ಕೊನೆಗೊಳ್ಳಲಿದೆ.  ರಾಜ್ಯದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದ, ಕಂಪ್ಯೂಟರ್ ಜ್ಞಾನ ಇರುವಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರುವ  ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ೩೫ ವರ್ಷ ಮೀರಿರಬಾರದು. 

ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. 

ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಅಂತಿಮ ವರ್ಷದ ಪದವಿ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.  ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ಮಾಹೆಯಾನ ೧೫ಸಾವಿರ ರೂ. ಗಳ ಶಿಷ್ಯವೇತನ ನೀಡಲಾಗುವುದು. ಈ ತರಬೇತಿಯು ತಾತ್ಕಾಲಿಕವಾಗಿರುತ್ತದೆ. 

ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸುವಂತೆ ಒತ್ತಡ ತರುವಂತಿಲ್ಲ. ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡಲು ಅವಕಾಶವಿಲ್ಲ. ತರಬೇತಿ ಮಧ್ಯದಲ್ಲಿ ಬಿಟ್ಟುಹೋದರೆ ಅವಧಿಗೆ ಮುನ್ನ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಸರ್ಕಾರಿ/ಖಾಸಗಿ ಸಂಸ್ಥೆಯಲ್ಲಿ ಖಾಯಂ ಉದ್ಯೋಗ ಸಿಕ್ಕಿದಲ್ಲಿ ಷರತ್ತಿಗೊಳಪಟ್ಟು ಮೂಲ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದು.

ಒಮ್ಮೆ ಫಲಾನುಭವಿಯಾದವರನ್ನು ಈ ತರಬೇತಿಯ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.  ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು ೨೦ರೂ.ಗಳ ಛಾಪಾ ಕಾಗದದಲ್ಲಿ ಲಿಖಿತವಾಗಿ ಹೇಳಿಕೆ ನೀಡಬೇಕು.

ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ೨ ಭಾವಚಿತ್ರ ಹಾಗೂ ಆಧಾರ್ ಕಾರ್ಡ್, ವಿಳಾಸದ ದೃಢೀಕರಣ ದಾಖಲೆ ಸೇರಿದಂತೆ ಇನ್ನಿತರೆ  ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ನವೆಂಬರ್ ೨೫ ಕಡೆ ದಿನವಾಗಿರುತ್ತದೆ. 

 ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ಬಾಳನಕಟ್ಟೆ, ತುಮಕೂರು ಇವರನ್ನು ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ